ತುಮಕೂರು: ತುರುವೇಕೆರೆ ಜೆಡಿಎಸ್ ಶಾಸಕ ಎಮ್ ಟಿ ಕೃಷ್ಣಪ್ಪ ಬೆಂಬಲಿಗರ ಗೂಂಡಾ ವರ್ತನೆ ಮುಂದುವರೆದಿದ್ದು, ಅಭಿವೃದ್ಧಿ ಕಾಮಗಾರಿ ಆಗಿಲ್ಲ ಎಂದು ಪ್ರಶ್ನಿಸಿದ್ದ ಗ್ರಾಮಸ್ಥರ ಮೇಲೆ ಶಾಸಕರ ಬೆಂಬಲಿಗರು ಹಿಗ್ಗಾಮಗ್ಗಾ ಥಳಿಸಿದ್ದಾರೆ.ತಾಲೂಕಿನ ಅಮ್ಮಸಂದ್ರದಲ್ಲಿ ಮನೆಮನೆಗೆ ಕುಮಾರಣ್ಣ ಕಾರ್ಯಕ್ರಮ ನಡೆಯುತಿತ್ತು. ಈ ಸಂದರ್ಭದಲ್ಲಿ ಗ್ರಾಮದ ನಿವಾಸಿ ಗೋಪಾಲ ಹಾಗೂ ಆತನ ಸ್ನೀಹಿತರು ನಮ್ಮೂರಲ್ಲಿ ಅಭಿವೃದ್ದಿ ಕೆಲಸ ಆಗಿಲ್ಲ. ನಾವ್ಯಾಕೆ ಜೆಡಿಎಸ್ ಗೆ ಮತ ಹಾಕಬೇಕು ಎಂದು ಪ್ರಶ್ನಿಸಿದ್ದಾರೆ.ಶಾಸಕ ಎಮ್ ಟಿ ಕೃಷ್ಣಪ್ಪರ ಸಮ್ಮುಖದಲ್ಲೇ ಈ ಪ್ರಶ್ನೆ ಕೇಳಿದ್ದಕ್ಕೆ ಬೆಂಬಲಿಗರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಜಗಳ ಅತಿರೇಕಕ್ಕೆ ತಲುಪಿ ಶಾಸಕರ ಬೆಂಬಲಿಗರು ಪ್ರಶ್ನಿಸಿದ ಯುವಕರ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ.ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಜಗಳ ನಡೆದಿದೆ. ಸ್ಥಳಕ್ಕೆ ದಂಡಿನಶಿವರ ಪೊಲಿಸರು ದೌಡಾಯಿಸಿದ್ದು ಸ್ಥಳದಲ್ಲಿ ಬಿಗುವಿನ ವಾತವರಣ ಉಂಟಾಗಿದೆ.https://www.youtube.com/watch?v=TrVNpT9tPWQSign in to your account
Username or Email Address


Password

 Remember Me


