ಉಡುಪಿ: ರಾಜ್ಯದ ಖಾಸಗಿ ಮಠ ಮಂದಿರಗಳನ್ನು ಸರ್ಕಾರೀಕರಣಗೊಳಿಸುವ ಬಗೆಗಿನ ಸರ್ಕಾರದ ನಡೆಗೆ ಉಡುಪಿಯಲ್ಲಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ. ಉಡುಪಿ ಶ್ರೀಕೃಷ್ಣ ಮಠವನ್ನು ಸರ್ಕಾರ ತನ್ನ ವಶಕ್ಕೆ ಪಡೆಯುವ ಪ್ರಯತ್ನ ಮಾಡಿದರೆ ನಾನು ಮಠದಿಂದ ಹೊರಬರುತ್ತೇನೆ. ಸರಕಾರದ ನೌಕರನಾಗಿ ನಾನು ಮಠದಲ್ಲಿ ಒಂದು ಕ್ಷಣವೂ ಇರಲಾರೆ ಎಂದ ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರತ್ಯುತ್ತರ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ದೇವಾಲಯ- ಮಠಗಳನ್ನು ಸರ್ಕಾರಿಕರಣ ಮಾಡುವ ಚಿಂತನೆ ವಿಪಕ್ಷಗಳ ಹೋರಾಟಕ್ಕೆ ಅಸ್ತ್ರ ಸಿಕ್ಕಂತಾಗುತ್ತದೆ. ಚುನಾವಣಾ ಹೊಸ್ತಿಲಲ್ಲಿ ವಿಪಕ್ಷಗಳು ಇದನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸುವ ಸಾಧ್ಯತೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನೂಲು ರಸ್ತೆಯಲ್ಲಿ ಜಂಪ್ ಆಯ್ತು ಇನ್ನೋವಾ ಕಾರು- ಪೇಜಾವರಶ್ರೀ ಬೆನ್ನು ಉಳುಕುಸರ್ಕಾರದ ವಿರುದ್ಧ ನಾನು ಹೋರಾಟ ಮಾಡುವುದಿಲ್ಲ. ಸರ್ಕಾರದ ಈ ನಡೆಯ ಬಗ್ಗೆ ಜನರು, ಮಠದ ಭಕ್ತರು ಚಿಂತನೆ ನಡೆಸಲಿ. ಒಂದು ಸರಿಯಾದ ತೀರ್ಮಾನಕ್ಕೆ ಬರಲಿ ಎಂದು ಪೇಜಾವರ ಸ್ವಾಮೀಜಿ ಹೇಳಿದರು.ನಾವು ಜಾತ್ಯಾತೀತ ಎಂದು ಕರೆಸಿಕೊಳ್ಳುವ ಸರ್ಕಾರ ಹೀಗೆ ಮಾಡಬಾರದು. ಬಹುಸಂಖ್ಯಾತ, ಅಲ್ಪಸಂಖ್ಯಾತರನ್ನು ಒಂದಾಗಿ ಕಾಣಬೇಕು. ರಾಜ್ಯದ ಜನತೆಯ ಬಗ್ಗೆ ತಾರತಮ್ಯ ಮಾಡಬಾರದು. ಆದರೆ ಇದಕ್ಕೆ ತದ್ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಇತ್ತೀಚೆಗೆ ಅಲ್ಪಸಂಖ್ಯಾತರ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಆದೇಶ ಪತ್ರ ಹೊರಡಿಸಿತ್ತು. ಮುಗ್ಧರೆಂದಾದರೆ ಎಲ್ಲರ ಪ್ರಕರಣಗಳನ್ನು ಸರ್ಕಾರ ಕೈಬಿಡಬೇಕು. ಇದೆಲ್ಲದಕ್ಕೆ ರಾಜ್ಯ ಸರ್ಕಾರ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದೆ. ಇಂತಹ ಗೊಂದಲಕಾರಿ ಆದೇಶಗಳಿಂದ ಜನ ಮತ್ತಷ್ಟು ಗೋಂದಲಕ್ಕೀಡಾಗುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮಠಗಳನ್ನು ಸರ್ಕಾರದ ಸುಪರ್ದಿಗೆ ಪಡೆಯುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವಿರೋಧಮಠ, ಖಾಸಗಿ ದೇವಸ್ಥಾನಗಳನ್ನು ಸರ್ಕಾರಿಕರಣ ಮಾಡುವ ಬಗ್ಗೆ ಯಾವುದೇ ನೋಟೀಸ್ ಈವರೆಗೆ ನಮ್ಮ ಕೈ ತಲುಪಿಲ್ಲ. ಪರ್ಯಾಯ ಮಠಕ್ಕೆ ಬಂದ ಬಗ್ಗೆಯೂ ಮಾಹಿತಿಯಿಲ್ಲ. ಸರಕಾರದ ಯಾವುದೇ ಮೂಲಗಳಿಂದ ತಿಳಿದುಬಂದಿಲ್ಲ. ಮಾಧ್ಯಮಗಳಲ್ಲಿ ನಡೆಯುತ್ತಿರುವ ಚರ್ಚೆ ಮತ್ತು ಸುದ್ದಿಯ ಪ್ರಸಾರ ನೋಡಿ ನನ್ನ ಅಭಿಪ್ರಾಯ ಹೇಳುತ್ತಿದ್ದೇನೆ ಎಂದು ಪೇಜಾವರಶ್ರೀ ಹೇಳಿದರು.ಯೂಟರ್ನ್ ಹೊಡೆದ ಸರ್ಕಾರ: ಮಠಗಳನ್ನು, ದೇವಾಲಯಗಳನ್ನು ವಶಪಡಿಸಿಕೊಳ್ಳುವ ಸಂಬಂಧ ಸಾರ್ವಜನಿಕ ಅಭಿಪ್ರಾಯ, ಆಕ್ಷೇಪಣೆಗೆ ಧಾರ್ಮಿಕ ದತ್ತಿ ಇಲಾಖೆ 15 ದಿನಗಳ ಕಾಲಾವಕಾಶ ಕೊಟ್ಟು, ಜನವರಿ 29 ರಂದು ಸಾರ್ವಜನಿಕ ಪ್ರಕಟಣೆ ಮಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಕೊನೆಗೆ ಎಚ್ಚೆತ್ತು ಹಿಂದೆ ಈಗ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ. ಸಿಎಂ ಸಿದ್ದರಾಮಯ್ಯ ನಡೆಯನ್ನ ಬಿಜೆಪಿ ನಾಯಕರು ಕಟುವಾಗಿ ಟೀಕಿಸಿದ್ದಾರೆ. ವ್ಯಾಪಕ ಟೀಕೆಯಿಂದ ಎಚ್ಚೆತ್ತ ಸಚಿವ ರುದ್ರಪ್ಪ ಲಮಾಣಿ ಅಂತ ಪ್ರಸ್ತಾವನೆಯೇ ಇಲ್ಲ. ಕೋರ್ಟ್ ನಿರ್ದೇಶನದಂತೆ ನಾವು ಅಭಿಪ್ರಾಯ ಕೇಳಿದ್ದೇವೆ. ಬಿಜೆಪಿಯವರು ಜನರನ್ನ ಎತ್ತಿಕಟ್ಟುವ ಕೆಲಸ ಮಾಡ್ತಿದ್ದಾರೆ ಎಂದರು.https://www.youtube.com/watch?v=wcUoOzXNf6YSign in to your account
Username or Email Address


Password

 Remember Me


