ಬೆಂಗಳೂರು: ಇನ್ಮುಂದೆ ಸಿಕ್ಕ ಸಿಕ್ಕಿದ್ದನ್ನೆಲ್ಲಾ ಪ್ರಸಾದ ಅಂತ ಹಂಚೋ ಹಾಗಿಲ್ಲ. ಯಾಕಂದ್ರೆ ಆಹಾರ ಸುರಕ್ಷತಾ ಇಲಾಖೆ ಹೊಸದೊಂದು ನಿಯಮ ಜಾರಿ ಮಾಡಿದೆ.ಮುಜುರಾಯಿ ಇಲಾಖೆ ದೇಗುಲ ಸೇರಿದಂತೆ ರಾಜ್ಯದ ಎಲ್ಲಾ ದೇಗುಲಗಳಿಗೆ, ಚರ್ಚ್ ಹಾಗೂ ಮಸೀದಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಪ್ರಸಾದ ವಿನಿಯೋಗಕ್ಕೆ ಲೈಸನ್ಸ್ ಪಡೆಯುವಂತೆ ಸೂಚಿಸಿದೆ.ಭಕ್ತರಿಗೆ ಪ್ರಸಾದ ರೂಪದಲ್ಲಿ ಯಾವುದೇ ಆಹಾರ ಪದಾರ್ಥ ನೀಡಿದ್ರೂ ಅದನ್ನು ಆಹಾರ ಸುರಕ್ಷತೆ ಇಲಾಖೆಯ ಲ್ಯಾಬ್‍ನಲ್ಲಿ ಪರೀಕ್ಷೆಗೆ ಒಳಪಡಿಸಬೇಕೆಂದು ಹೇಳಿದೆ. ದೇಗುಲದಲ್ಲಿ ವಿತರಣೆ ಮಾಡುವ ಪ್ರಸಾದದಲ್ಲಿ ಗುಣಮಟ್ಟ ಕಾಪಾಡುವುದಿಲ್ಲ ಅಂತಾ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರೋದಾಗಿ ಅಧಿಕಾರಿಗಳು ಹೇಳಿದ್ದಾರೆ.ಮೂರು ಬಾರಿ ನೋಟಿಸ್ ನೀಡಿದ ನಂತರವೂ ಲೈಸೆನ್ಸ್ ಪಡೆಯದೇ, ಪ್ರಸಾದ ಪರೀಕ್ಷೆಗೆ ಒಳಪಡಿಸದೇ ವಿತರಣೆ ಮಾಡಿದ್ರೆ ದಂಡ ವಿಧಿಸಲು ಆಹಾರ ಇಲಾಖೆ ನಿರ್ಧರಿಸಿದೆ.Sign in to your account
Username or Email Address


Password

 Remember Me


