ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ದಲಿತರಿಗೆ ಸವರ್ಣಿಯರು ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ.ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತರದಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಲಿತರು ಗ್ರಾಮದಲ್ಲಿರುವ ಸವರ್ಣಿಯರ ಅಂಗಡಿಗಳಲ್ಲಿ ಮನೆ ಸಾಮಗ್ರಿಗಳನ್ನ ಖರೀದಿಸುವಂತಿಲ್ಲ. ಒಂದು ವೇಳೆ ದಲಿತರಿಗೆ ಸಾಮಾಗ್ರಿಗಳನ್ನು ನೀಡಿದರೆ ಅಂತಹವರಿಗೆ ಒಂದು ಸಾವಿರ ರೂ. ದಂಡ ವಿಧಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ದಲಿತರನ್ನು ಕೂಲಿ ಕೆಲಸಕ್ಕೂ ಸಹ ಕರೆಯಬಾರದು ಎಂದು ದಿಗ್ಬಂಧನ ವಿಧಿಸಿ ಬಹಿಷ್ಕಾರ ಹಾಕಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.ಈ ಸಂಬಂಧ ತಹಶೀಲ್ದಾರ್ ಕಚೇರಿಗೆ ತರದಲೆ ಗ್ರಾಮದ ದಲಿತ ಮುಖಂಡರು ಮತ್ತು ದಲಿತ ಸಂಘಟನೆ ಕಾರ್ಯಕರ್ತರು ಭೇಟಿ ನೀಡಿ ಗ್ರಾಮದ ಪರಿಸ್ಥಿತಿ ವಿವರಿಸಿ ತಪ್ಪಿತ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಗ್ರಾಮದಲ್ಲಿ ಮೂರು ವರ್ಷಗಳ ಹಿಂದೆ ಕ್ಷುಲಕ ಕಾರಣಕ್ಕೆ ದಲಿತರು ಮತ್ತು ಸವರ್ಣಿಯರ ನಡುವೆ ಊರ ಹಬ್ಬದ ವೇಳೆ ಜಗಳ ಉಂಟಾಗಿತ್ತು. ಈಗ ಮತ್ತೆ ಊರ ಹಬ್ಬ ಮಾಡುವ ವೇಳೆ ಹಳೇ ಜಗಳದ ಹಿನ್ನೆಲೆಯಲ್ಲಿ ಸವರ್ಣಿಯರು ದಲಿತರಿಗೆ ಬಹಿಷ್ಕಾರ ಹಾಕಿ ಹಬ್ಬ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.Sign in to your account
Username or Email Address


Password

 Remember Me


