ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಪರವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಇಂದು ನಡೆಯಲಿದೆ. ಹೀಗಾಗಿ ಬಿಜೆಪಿ ನಾಯಕರು ಪ್ರಧಾನಿಯವರ ಸ್ವಾಗತಕ್ಕೆ ಭರ್ಜರಿ ಸಿದ್ಧತೆಗಳನ್ನು ನಡೆಸಿದ್ದರೆ, ಇತ್ತ ಮಹದಾಯಿ ಹೋರಾಟಗಾರರು ಮೋದಿಗೆ ಪ್ರತಿಭಟನೆಯ ಬಿಸಿ ನೀಡಲು ರೆಡಿಯಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರು ಹಸಿರು ಶಾಲು ತೆಗೆದು ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು, ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯಿಸಲಿದ್ದಾರೆ ಎನ್ನಲಾಗಿದೆ.ಕನ್ನಡ ಒಕ್ಕೂಟದ ಜಾಥಾದಲ್ಲಿ ಮಹದಾಯಿ ಹೋರಾಟಗಾರರು ಭಾಗವಹಿಸಲಿದ್ದಾರೆ. ಫ್ರೀಡಂಪಾರ್ಕ್‍ನಿಂದ ಅರಮನೆ ಮೈದಾನದವರೆಗೆ ಕನ್ನಡ ಒಕ್ಕೂಟದ ವಾಟಾಳ್ ನೇತೃತ್ವದಲ್ಲಿ ಜಾಥಾ ನಡೆಯಲಿದ್ದು ಮೆಜೆಸ್ಟಿಕ್, ಫ್ರೀಡಂಪಾರ್ಕ್ ಬಳಿಯೂ ಟ್ರಾಫಿಕ್ ಜಾಮ್ ಉಂಟಾಗಲಿದೆ. ಹೀಗಾಗಿ ಇಂದು ಬೆಂಗಳೂರು ರೋಡ್‍ಲ್ಲಿ ಸಂಚರಿಸಿದ್ರೆ ಟ್ರಾಫಿಕ್ ಬಿಸಿಯಲ್ಲಿ ತಗ್ಲಾಕ್ಕೊಳ್ಳೋದು ಗ್ಯಾರಂಟಿಯಾಗಿದೆ.ಸಮಾವೇಶದಲ್ಲಿ ಮಾತನಾಡುವ ಪ್ರಧಾನಿ ಅವರು ಮಹದಾಯಿ ವಿಚಾರವನ್ನು ಪ್ರಸ್ತಾಪ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳು ಈ ಹಿಂದೆ ಒತ್ತಾಯ ಮಾಡಿದ್ದವು. ಆದರೆ ಸಮಾವೇಶದಲ್ಲಿ ಚುನಾವಣಾ ಭಾಷಣ ಮಾತ್ರ ಮೋದಿ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಭಾಷಣದ ವೇಳೆ ಕೇಂದ್ರದಿಂದ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತಾರಾ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.ಕೇಂದ್ರ ಬಜೆಟ್ ಬಳಿಕ ಮೊದಲ ಸಾರ್ವಜನಿಕ ಭಾಷಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದು, ವಿದೇಶಗಳಲ್ಲಿರುವ ಎನ್‍ಆರ್‍ಐಗಳಿಗೆ ಮೋದಿ ಭಾಷಣ ತಲುಪಿಸಲು ಬಿಜೆಪಿ ವ್ಯವಸ್ಥೆ ಮಾಡಿಕೊಂಡಿದೆ. ಬಿಜೆಪಿ ಕರ್ನಾಟಕ, ಬಿಜೆಪಿ ಇಂಡಿಯಾ, ಬಿಜೆಪಿ ಟ್ವಿಟ್ಟರ್ ಸಾಮಾಜಿಕ ಜಾಲತಾಣಗಳ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಭಾಷಣ ಪ್ರಸಾರ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇಷ್ಟೇ ಅಲ್ಲದೆ 200 ಸೋಶಿಯಲ್ ಮೀಡಿಯಾ ಕಾರ್ಯಕರ್ತರಿಂದ ಫೇಸ್ ಬುಕ್ ಮೂಲಕ ಲೈವ್ ನೀಡಲು ತೀರ್ಮಾನ ತೆಗೆದುಕೊಂಡಿದ್ದು, ಮೋದಿ ಭಾಷಣ ಲೈವ್ ಪ್ರಸಾರ ಮಾಡಲೆಂದೇ ಆಯ್ದ ಕಾರ್ಯಕರ್ತರಿಗೆ ಸೂಕ್ತ ತರಬೇತಿ ನೀಡಲಾಗಿದೆ.Sign in to your account
Username or Email Address


Password

 Remember Me


