ಹಾವೇರಿ: ಕರ್ತವ್ಯ ನಿರತ ಭಾರತೀಯ ಸೇನೆ ಯೋಧರೊಬ್ಬರು ಕಾರ್ಯನಿರ್ವಹಿಸುತ್ತಿದ್ದ ವೇಳೆ ಅರುಣಾಚಲ ಪ್ರದೇಶದ ತವಾಂಗ್ ನಲ್ಲಿ ಹುತಾತ್ಮರಾಗಿದ್ದಾರೆ.ಮೂಲತಃ ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಮುಗಳಿ ಗ್ರಾಮದ ಚಂದ್ರಶೇಖರ ಡವಗಿ ಅವರು ಹುತಾತ್ಮರಾಗಿದ್ದಾರೆ. ಕರ್ತವ್ಯದ ವೇಳೆ ಭಂಗಾ ಎಂ.ಎಚ್ ಪ್ರದೇಶದಲ್ಲಿ ಆಮ್ಲಜನಕ ಕೊರತೆಯಿಂದ ಸಾವನಪ್ಪಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದಂತೆ ಗ್ರಾಮದಲ್ಲಿ ಆವರಿಸಿದ ಕಾರ್ಮೋಡ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಚಂದ್ರಶೇಖರ್ 16 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 2002ರಲ್ಲಿ ಮದ್ರಾಸ್ ರೆಜಿಮೆಂಟ್ ಸೆಂಟರ್ ನಲ್ಲಿ ಸೇವೆಗೆ ಸೇರಿದ್ದ ಇವರು ಜನವರಿ 29 ರಂದು ರಜೆ ಮುಗಿಸಿ ಸೇನೆಗೆ ಮರಳಿದ್ದರು.ಮೃತ ಚಂದ್ರಶೇಖರ್ ಅವರು ತಂದೆ, ತಾಯಿ, ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು, ಕೆಲವೇ ತಿಂಗಳಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಪೂರ್ಣಗೊಳಿಸಿ ಊರಿಗೆ ವಾಪಸ್ಸಾಗುತ್ತಿದ್ದರು. ಯೋಧನ ಗ್ರಾಮಕ್ಕೆ ಶಿಗ್ಗಾಂವ ತಹಸೀಲ್ದಾರ ಶಿವಾನಂದ ರಾಣೆ ಭೇಟಿ ನೀಡಿದ್ದಾರೆ.ಇಂದು ಸಂಜೆ ವೇಳೆಗೆ ಹುತಾತ್ಮ ಯೋಧನ ಪಾರ್ಥೀವ ಶರೀರ ಸ್ವ ಗ್ರಾಮಕ್ಕೆ ಬರುವ ನಿರೀಕ್ಷೆ ಇದ್ದು, ಅಂತ್ಯ ಸಂಸ್ಕಾರಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ ಎಂ.ವಿ ಕೂಡ ಹೇಳಿಕೆ ನೀಡಿದ್ದಾರೆ.







 Advertisement 




Sign in to your account
Username or Email Address


Password

 Remember Me


