ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 1 ಕೋಟಿ 11 ಲಕ್ಷದ 25 ಸಾವಿರದ 636 ರುಪಾಯಿ ನಗದು ಕಾಣಿಕೆಯಾಗಿ ದೊರತಿದೆ.ಇದರ ಜೊತೆಗೆ 25 ಗ್ರಾಂ ಚಿನ್ನ ಮತ್ತು 1 ಕೆ.ಜಿ 382 ಗ್ರಾಂ ಬೆಳ್ಳಿ ಆಭರಣಗಳು ಭಕ್ತರಿಂದ ಕಾಣಿಕೆ ರೂಪದಲ್ಲಿ ಲಭ್ಯವಾಗಿದೆ. ಜನವರಿ 31ರ ತಡರಾತ್ರಿವರೆಗೂ ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಇಷ್ಟೊಂದು ಕಾಣಿಕೆ ಭಕ್ತರಿಂದ ಬಂದಿದೆ.ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜಿ ರೂಪ ಅಧ್ಯಕ್ಷತೆಯಲ್ಲಿ, ಸಾಲೂರು ಮಠದ ಗುರುಸ್ವಾಮಿ ಸಮ್ಮಖದಲ್ಲಿ ಮತ್ತು ಎಸ್‍ಬಿಐ ಬ್ಯಾಂಕ್ ಸಿಬ್ಬಂದಿಗಳು ಸಿಸಿ ಕ್ಯಾಮಾರಾದ ಕಣ್ಗಾವಲಿನಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಸಿದರು.ಹುಂಡಿ ಎಣಿಕೆ ಕಾರ್ಯ ಪ್ರತಿ ತಿಂಗಳ ಕೊನೆಯ ದಿನದಂದು ನಡೆಯುತ್ತದೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಆದಾಯ ತರುವ ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ 2ನೇ ಸ್ಥಾನವನ್ನ ಮಲೆ ಮಹದೇಶ್ವರ ದೇವಾಲಯದ ಪಡೆದುಕೊಂಡಿದೆ.Sign in to your account
Username or Email Address


Password

 Remember Me


