ಕೊಪ್ಪಳ: ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳೋದೆಲ್ಲಾ ಬರೀ ಸುಳ್ಳು. ಅಲ್ಲದೇ ಸಂಸ್ಕೃತ ದ್ವೇಷಿ ಕೂಡ. ಇತ್ತೀಚೆಗಷ್ಟೇ ಶ್ರೀರಾಮನ ಬಗ್ಗೆ ಮಾತನಾಡಿದ್ದ ಇವರಿಗೆ ಸಂಸ್ಕೃತ ಪಾಠ ಶಾಲೆಯ ಅವಶ್ಯಕತೆಯಿಲ್ಲ ಅಂತ ಅರ್ಚಕ ವಿದ್ಯಾದಾಸ್ ಬಾಬಾ ಹೇಳಿದ್ದಾರೆ.ಅಂಜನಾದ್ರಿ ಪರ್ವತದಲ್ಲಿ ಸಂಸ್ಕೃತ ಪಾಠ ಶಾಲೆ ನಡೆಯಲು ಶಾಸಕರು ಅಡ್ಡಿಪಡಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಪತ್ನಿ ಪೂಜೆ ಸಲ್ಲಿಸೋ ಅಂಜನಾದ್ರಿ ಪರ್ವತಕ್ಕೆ 2 ಕೋಟಿ ರೂ. ಅನುದಾನ ನೀಡಿದ್ದೇನೆ ಅಂತಾ ಬೊಗಳೆ ಬಿಟ್ಟು ತಗಲಾಕೊಂಡಿದ್ದಾರೆ ಅಂತ ಶಾಸಕರ ಸುಳ್ಳಿನ ಮುಖವಾಡವನ್ನ ಅರ್ಚಕ ವಿದ್ಯಾದಾಸ್ ಬಾಬಾ ದಾಖಲೆ ಸಮೇತ ಬಯಲು ಮಾಡಿದ್ದಾರೆ. ಇದನ್ನೂ ಓದಿ: ಮನೆಯೊಳಗೆ ಜೈ ಶ್ರೀರಾಮ್, ಹೊರಗೆ ಕೊಲೆ ಸುಲಿಗೆ: ಶಾಸಕ ಇಕ್ಬಾಲ್ ಅನ್ಸಾರಿ ವಿವಾದಿತ ಹೇಳಿಕೆಈ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದ ಆರ್.ವಿ ದೇಶಪಾಂಡೆ ಪರ್ವತದ ಅಭಿವೃದ್ಧಿಗೆ 2 ಕೋಟಿ ರೂ. ಅನುದಾನ ನೀಡಿದ್ದಾರೆ. ಎಂಎಲ್‍ಸಿ 10 ಲಕ್ಷ, ಸಂಸದ ಸಂಗಣ್ಣ ಕರಡಿ 10 ಲಕ್ಷ ರೂ. ಅನುದಾನ ನೀಡಿದ್ದಾರೆ. ಆದ್ರೆ ಶಾಸಕ ಇಕ್ಬಾಲ್ ಅನ್ಸಾರಿ ನಯಾಪೈಸೆ ಅನುದಾನ ನೀಡದೇ ಸುಳ್ಳು ಹೇಳುತ್ತಾ ಹಿಂದೂ ಕಾರ್ಯಕರ್ತರಿಗೆ ಮೋಸ ಮಾಡುತ್ತಿದ್ದಾರೆ ಅಂತ ಅವರು ಆರೋಪಿಸಿದ್ದಾರೆ.ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅನ್ಸಾರಿ, ಮರ್ಯಾದಾ ಪುರುಷೋತ್ತಮ ಶ್ರೀರಾಮನ ಹೆಸರಿನಲ್ಲಿ ಕೊಲೆ ಸುಲಿಗೆ ನಡೆಯುತ್ತಿದೆ. ಶ್ರೀರಾಮನ ಹೆಸರಿನಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ಈ ಮೂಲಕ ನಮ್ಮ ಯುವಕರನ್ನು ಜೈಲಿಗೆ ಹೋಗಬೇಕೆಂದು ಕುಮ್ಮಕ್ಕು ಕೊಡುತ್ತಿದ್ದಾರೆ. ಮೋದಿ ಪ್ರಧಾನಿಯಾದ ಮೇಲೆ ಇದು ಹೆಚ್ಚಾಗಿದೆ. ಅವರಿಗೆ ಸಂವಿಧಾನ, ಕಾನೂನು ಇಲ್ಲ. ನಮಗೆ ಇರುವ ದೇಶಾಭಿಮಾನ ಅವರಿಗಿಲ್ಲ ಎಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಧಮ್ ಇದ್ರೆ ನನ್ನ ಸಾಧನೆ ತೋರಿಸಿ – ನನ್ನನ್ನು ಟಿವಿಗೆ ಚರ್ಚೆಗೆ ಕರೆಯಿರಿ ಎಂದ ಕೊಪ್ಪಳ ಶಾಸಕ ಅನ್ಸಾರಿಈ ವಿಚಾರ ಸುದ್ದಿಯಾದ ಬೆನ್ನಲ್ಲೇ ಶಸಕರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ನಾನು ಏನು ಹೇಳಿದ್ದೀನಿ ಅನ್ನೋದು ಟಿವಿಯವರು ಪೂರ್ಣ ತೋರಿಸುವುದಿಲ್ಲ. ಹಿಂದೆ- ಮುಂದೆ ಏನು ಹೇಳಿದ್ದೀನಿ ಅನ್ನೋದು ಬಿಟ್ಟು ಶ್ರೀರಾಮ ಹೆಸ್ರಲ್ಲಿ ಕೊಲೆ -ಅನ್ಸಾರಿ ಹೇಳಿಕೆ ಅಂತ ತೋರಿಸ್ತಾರೆ. ಇದಕ್ಕೆ ಗೋಮಧುಸೂದನ್ ಕರೆದು ಡಿಬೇಟ್ ಮಾಡ್ತಾರೆ. ಗಡ್ಡ ಬಿಟ್ಟ ಅಮಾಯಕ ಮುಸ್ಲಿಮ್ ವ್ಯಕ್ತಿಗಳನ್ನು ಕರೆದು ಏನ್ರಿ ಶಾಸಕ ಅನ್ಸಾರಿ ಹೀಗೆ ಹೇಳಿದ್ದಾರೆ ಅಂತ ಕೇಳ್ತಾರೆ. ಅದಕ್ಕೆ ಅವರು ಈ ರೀತಿ ಹೇಳೋದು ತಪ್ಪು ಅಂತಾರೆ ಎಂದು ಮಾಧ್ಯಮದ ವಿರುದ್ಧ ಅನ್ಸಾರಿ ಹರಿಹಾಯ್ದಿದ್ದರು.Sign in to your account
Username or Email Address


Password

 Remember Me


