ವಿಜಯಪುರ: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರು ಪ್ರಶಸ್ತಿಯನ್ನು ಗೌರವಯುತವಾಗಿ ಹಿಂತಿರುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಅವರಿಗೆ ಪ್ರಶಸ್ತಿ ಹಿಂತಿರುಗಿಸುವ ಮನವಿಯನ್ನು ಮಾಡಿದ್ದಾರೆ. ಇದೇ ವೇಳೆ ನನ್ನನ್ನು ಸಂಪರ್ಕಿಸಿದೇ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.ನಾನೊಬ್ಬ ಸಾಮಾನ್ಯ ಆಧ್ಯಾತ್ಮಿಕ ಜೀವಿ, ಅದಕ್ಕಾಗಿ ನಾನು ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ ತಾವುಗಳು ಅನ್ಯತ ತಪ್ಪು ಭಾವಿಸಬೇಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಹಿಂದೆಯೂ ಹಲವು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ಕೊಡುವುದಾಗಿ ಸ್ವಾಮೀಜಿ ಅವರನ್ನು ಸಂಪರ್ಕಿಸಿದ್ದವು, ಈ ವೇಳೆಯೂ ಅವರು ಪ್ರಶಸ್ತಿಗಳನ್ನು ತಿರಸ್ಕರಿಸಿದ್ದರು.ಈ ವೇಳೆ ಇಂತಹ ಪ್ರಶಸ್ತಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ನೀಡಿ ಗೌರವಿಸಿ ಎಂದು ಮನವಿ ಮಾಡಿದ್ದಾರೆ.https://www.youtube.com/watch?v=ttnH724akH8https://www.youtube.com/watch?v=GJyM56B95hE Sign in to your account
Username or Email Address


Password

 Remember Me


