ಕೋಲಾರ: ಅನಾರೋಗ್ಯ ಹಾಗೂ ಸಾಲಬಾಧೆ ತಾಳಲಾರದೆ ದಂಪತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಂಡಿಕಲ್ ಗ್ರಾಮದಲ್ಲಿ ನಡೆದಿದೆ.ಗ್ರಾಮದ ವೆಂಕಟರಮಣಪ್ಪ (57), ಪಾರ್ವತಮ್ಮ (45) ಆತ್ಮಹತ್ಯೆಗೆ ಶರಣಾದ ದಂಪತಿ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಗಂಡನ ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಸತಿ-ಪತಿ ನೇಣಿಗೆ ಶರಣಾಗಿದ್ದಾರೆ ಎಂದು ಮಗ ನರೇಶ್ ದೂರಿನಲ್ಲಿ ತಿಳಿಸಿದ್ದಾರೆ.ಕಳೆದ 5 ವರ್ಷಗಳಿಂದ ವೆಂಕಟರಮಣಪ್ಪ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದರು. ಸಾಲಬಾಧೆ ತಾಳಲಾರದೆ ಸಾವಿಗೆ ಶರಣಾಗಿದ್ದಾರೆ ಎಂದು ಮಗ ನರೇಶ್ ಮುಳಬಾಗಿಲು ಪೊಲೀಸರಿಗೆ ತಿಳಿಸಿದ್ದಾರೆ.ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


