ಬೆಂಗಳೂರು: ಮಹದಾಯಿಗಾಗಿ ಗುರುವಾರ ಕರೆ ನೀಡಿದ್ದ ಬಂದ್ ವಿಚಾರದಲ್ಲಿ ಕನ್ನಡ ಸಂಘಟನೆಗಳ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಹೋಟೆಲ್ ಮಾಲೀಕರು ಬಂದ್ ಗೆ ಬೆಂಬಲ ನೀಡಲ್ಲ ಎಂದು ಹೇಳಿದ್ದಾರೆ.ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಹೋಟೆಲ್ ಅಸೊಸಿಯೇಷನ್ ಅಧ್ಯಕ್ಷ ರಾಧಾಕೃಷ್ಣ ಅವರು, ಹೋಟೆಲ್ ಮಾಲೀಕರ ಸಂಘ ವತಿಯಿಂದ ಜನವರಿ 25 ರಂದು ನಡೆಯುವ ಬಂದ್ ಗೆ ಬೆಂಬಲ ನೀಡದಿರಲು ನಿರ್ಧರಿಸಲಾಗಿದೆ. ಬಂದ್ ನಡೆಯುವುದರಿಂದ ಜನ ಜೀವನ ಅಸ್ತವ್ಯಸ್ತವಾಗುತ್ತದೆ. ಹಾಗಾಗಿ ನಾವು ಯಾವುದೇ ರೀತಿಯ ಬಂದ್ ಗೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.ಹೋಟೆಲ್ ಮಾಲೀಕರ ಬೆನ್ನಲ್ಲೇ ಕರ್ನಾಟಕ ಟ್ಯಾಕ್ಸಿ ಚಾಲಕರ ಸಂಘಟನೆಯೂ ಬಂದ್ ಬೆಂಬಲ ನೀಡುವ ವಿಚಾರವಾಗಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ¸ಸ್ಪಷ್ಟನೆ ನೀಡಿದ ಟ್ಯಾಕ್ಸಿ ಚಾಲಕರ ಅಧ್ಯಕ್ಷರು, ನಮ್ಮನ್ನು ಯಾವ ಕನ್ನಡಪರ ಸಂಘಟನೆಗಳು ಸಂಪರ್ಕಿಸಿ ಬಂದ್ ಗೆ ಬೆಂಬಲ ಕೇಳಿಲ್ಲ. ಹಾಗಾಗಿ ಬಂದ್ ಗೆ ಬೆಂಬಲ ನೀಡುವ ವಿಚಾರವಾಗಿ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ.Sign in to your account
Username or Email Address


Password

 Remember Me


