ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ದರ್ಶನ್, ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದಿದ್ದಾರೆ.ನಟ ದರ್ಶನ್ ಕಾಶಿನಾಥ್ ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಟ್ವಿಟ್ಟರ್‍ನಲ್ಲೂ ಕೂಡ ದರ್ಶನ್ ಕಾಶಿನಾಥ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. 2 ದಿನಗಳ ಹಿಂದೆ ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ದಾಖಲಾಗಿದ್ದ ಕಾಶಿನಾಥ್, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಬಸವನಗುಡಿಯ ಎನ್‍ಆರ್ ಕಾಲೋನಿಯ ಎಪಿಎಸ್ ಕಾಲೇಜ್ ಗ್ರೌಂಡ್‍ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಕಾಶಿನಾಥ್ ಅವರ ಮಗಳು ದುಬೈನಿಂದ ಬಂದ ನಂತರ ಅಂತಿಮ ವಿಧಿವಿಧಾನ ನಡೆಯಲಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಚಾಮರಾಜಪೇಟೆಯ ಟಿಆರ್ ಮಿಲ್‍ನಲ್ಲಿನ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಶಿಷ್ಠವಾದ ನಿರ್ದೇಶನ ಹಾಗೂ ನಟನೆಟಿಯಿಂದ ಗಮನ ಸೆಳೆದಿದ್ದ ಹಿರಿಯ ಕಲಾವಿದರಾದ ಕಾಶೀನಾಥ್ ರವರು ಇಂದು ನಮ್ಮನ್ನು ದೈಹಿಕವಾಗಿ ಅಗಲಿದ್ದಾರೆ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ನೀಡಲಿ.#RIPKashinathaSir pic.twitter.com/gtCtkMIXv2— Darshan Thoogudeepa (@dasadarshan) January 18, 2018https://www.youtube.com/watch?v=gnBbvv8FdKohttps://www.youtube.com/watch?v=d2LtElBseS0https://www.youtube.com/watch?v=Z-vlkIrlNXw  Sign in to your account
Username or Email Address


Password

 Remember Me


