ಉಡುಪಿ: ಕರಾವಳಿಯಲ್ಲಿ ದೈವ ಮತ್ತೆ ಕಾರಣಿಕ ತೋರಿದೆ. ದೈವಸ್ಥಾನದಿಂದ ಕದ್ದ ಆಭರಣಗಳನ್ನು ಕಳ್ಳರು ವಾಪಾಸ್ ತಂದಿಟ್ಟಿದ್ದಾರೆ. ಉಡುಪಿ ಜಿಲ್ಲೆ ಕಟಪಾಡಿಯಲ್ಲಿ ಈ ಕೌತುಕ ನಡೆದಿದೆ.ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿಯನ್ನು ಹೊಂದಿದೆ ಎನ್ನುವುದು ಎಲ್ಲರಿಗೂ ತಿಳಿದಿರೋ ವಿಚಾರ. ಇಂತಹ ದೈವಸ್ಥಾನದ ಮುಂದೆ ಎಂತವನೂ ಕೇಡು ಬಗೆಯಲು ಮುಂದಾಗೋದಿಲ್ಲ. ಆದ್ರೆ ಏನಾದ್ರೂ ಕೇಡು ಬಗೆದಲ್ಲಿ ದೈವ ಶಕ್ತಿಗಳು ಆತನನ್ನು ಮಟ್ಟ ಹಾಕುತ್ತೆ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಇದನ್ನೂ ಓದಿ:   ದೈವಕ್ಕೆ ಬೈಯ್ದಿದ್ದಕ್ಕೆ ಇಡೀ ಕುಟುಂಬಕ್ಕೆ ಅನಾರೋಗ್ಯ – ಕೊರಗಜ್ಜನಲ್ಲಿ ಯುವಕನಿಂದ ಕ್ಷಮೆಯಾಚನೆಉಡುಪಿಯ ಕಟಪಾಡಿಯ ಏಣಗುಡ್ಡೆ ಎಂಬಲ್ಲಿರೋ ನೀಚ ದೈವ ಅಥವಾ ಕರಾವಳಿಯಾದ್ಯಂತ ಅಜ್ಜ ಎಂದೇ ಗುರುತಿಸಿಕೊಂಡಿರುವ ಸ್ವಾಮಿ ಕೊರಗಜ್ಜನ ಆಭರಣಗಳನ್ನು ಕದ್ದೊಯ್ದಿದ್ದ ಕಳ್ಳನೊಬ್ಬ ತಾನಾಗಿಯೇ ಮಕರ ಸಂಕ್ರಮಣ ದಿನದಂದು ಕೆಲವೊಂದು ಬೆಳ್ಳಿ ಆಭರಣಗಳನ್ನು ತಂದು ದೈವಸ್ಥಾನದ ಬಾಗಿಲ ಬಳಿ ಇಟ್ಟು ಹೋಗಿದ್ದಾನೆ. ಪವಾಡ ಅಂದ್ರೆ, ಕಳೆದ ವರುಷ ಅಕ್ಟೋಬರ್ 2 ರ ರಾತ್ರಿ ಇಲ್ಲಿ ಕಳವು ನಡೆದಿತ್ತು. ಆಗ ಅಷ್ಟಮಂಗಲ ಪ್ರಶ್ನೆ ಇಟ್ಟಾಗ ಮುಂದಿನ ಮಕರ ಸಂಕ್ರಮಣದೊಳಗಾಗಿ ಕದ್ದ ಆಭರಣ ದೈವಸ್ಥಾನ ಸೇರಲಿದೆ ಎನ್ನು ವಿಶ್ವಾಸ ವ್ಯಕ್ತವಾಗಿತ್ತು. ಇದೀಗ ಆ ಮಾತು ನಿಜವಾಗಿದೆ.ಸೋಮವಾರ ಮಕರ ಸಂಕ್ರಮಣದ ದಿನ ಕದ್ದ ಕೆಲವು ಬೆಳ್ಳಿ ಆಭರಣಗಳು ದೈವಸ್ಥಾನ ಸೇರಿವೆ. ನಿನ್ನೆ ಖದೀಮರು ದೈವಸ್ಥಾನದ ಬಾಗಿಲ ಬಳಿ ತಂದಿಟ್ಟು ಹೋಗಿದ್ದು, ಕೊರಗಜ್ಜನ ಮಹಿಮೆಗೆ ಕೈ ಗನ್ನಡಿ ಹಿಡಿದಂತಾಗಿದೆ. ಸದ್ಯ ತಂದಿಟ್ಟ ಬೆಳ್ಳಿಯ ಪರಿಕರಗಳು ಕಾಪು ಠಾಣಾ ಪೊಲೀಸರ ವಶದಲ್ಲಿದೆ. ಇನ್ನೂ ಒಂದಿಷ್ಟು ಆಭರಣಗಳು ಬಾಕಿ ಇದ್ದು ಅದನ್ನೂ ಕದ್ದೊಯ್ದ ಕಳ್ಳರು ತಂದಿಡುವ ವಿಶ್ವಾಸವನ್ನು ಗ್ರಾಮಸ್ಥರು ಹೊಂದಿದ್ದಾರೆ.ನಾರಾಯಣ ಕಟಪಾಡಿ ಆನಂದ ಮಾಬೆನ್ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ನಮ್ಮ ದೈವ ಬಹಳ ಕಾರಣಿಕದ್ದು. ದರ್ಶನದಲ್ಲೂ ಕದ್ದ ನಗನಾಣ್ಯ ಸಿಗುತ್ತದೆ ಎಂದು ಬಂದಿತ್ತು. ಹಾಗೆಯೇ ಆಗಿದೆ. ನಂಬಿದ ದೈವ ಕೈ ಬಿಡಲಿಲ್ಲ ಎಂದು ಹೇಳಿದ್ದಾರೆ.






 Advertisement 




Sign in to your account
Username or Email Address


Password

 Remember Me


