ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿರಾಯನೊಬ್ಬ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನೆಲಮಂಗಲ ತಾಲೂಕಿನ ಸೂಲಕುಂಟೆ ಗ್ರಾಮದಲ್ಲಿ ನಡೆದಿದೆ.ಲಕ್ಷ್ಮೀ ನರಸಮ್ಮ(40) ಮೃತ ದುರ್ದೈವಿ. ಕುಡಿದ ಅಮಲಿನಲ್ಲಿ ಪತಿ ವೆಂಕಟೇಶ್ ಈ ಕೃತ್ಯ ಎಸಗಿದ್ದಾನೆಂದು ಹೇಳಲಾಗುತ್ತಿದೆ. ಕುಡಿದ ಮತ್ತಿನಲ್ಲಿದ್ದ ಪತಿ ವೆಂಕಟೇಶ್ ಮನೆಯಲ್ಲಿ ಅಡುಗೆ ಮಾಡಿಲ್ಲವೆಂದು ಸಿಟ್ಟಾಗಿ ಕೋಲಿನಿಂದ ಮತ್ತು ಕಲ್ಲಿನಿಂದ ಲಕ್ಷ್ಮೀ ನರಸಮ್ಮಗೆ ಹೊಡೆದು ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ನರಸಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಆರೋಪಿ ಪತಿ ವೆಂಕಟೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


