ಬೆಂಗಳೂರು: ಸಿಬ್ಬಂದಿಗೆ ವಿಧಾನಸೌಧದಲ್ಲೇ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸಲು ಅಲ್ಲಿನ ಸಿಬ್ಬಂದಿ ಪರದಾಡಿದ ಘಟನೆ ನಡೆದಿದೆ.ಸಚಿವಾಲಯ ಸಿಬ್ಬಂದಿ ಅಮ್ಜದ್ ಪಾಶಾ ಅವರು ಇಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಬಂದಿದ್ದ ವೇಳೆ ವಿಧಾನ ಸೌಧದ ಒಳಗಡೆಯೇ ಅಸ್ವಸ್ಥರಾಗಿ ಬಿದ್ದಿದ್ದಾರೆ. ಆದ್ರೆ ಆ ಕೂಡಲೇ ಅವರಿಗೆ ತುರ್ತು ಚಿಕಿತ್ಸಾ ಸೌಲಭ್ಯವಿಲ್ಲದೇ ಸಿಬ್ಬಂದಿ ಗಲಿಬಿಲಿಗೊಂಡಿದ್ದಾರೆ.ಹೃದಯಾಘಾತ ಸಂಭವಿಸಿ ಪಾಶಾ ಬಿದ್ದಿದ್ದರೂ ಒಂದೆಡೆ ಸ್ಟ್ರೆಚರ್ ವ್ಯವಸ್ಥೆಯೂ ಇರಲಿಲ್ಲ. ಇನ್ನೊಂದೆಡೆ ಆಂಬುಲೆನ್ಸ್ ಕೂಡ ತಡವಾಗಿ ಬಂದಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಕಚೇರಿ ಕುರ್ಚಿಯ ಮೂಲಕವೇ ಅವರನ್ನು ಸಚಿವಾಲಯ ಕಚೇರಿಯಿಂದ ಹೊರಗಡೆ ಕರೆತಂದಿದ್ದು, ಬಳಿಕ ಆಂಬುಲೆನ್ಸ್ ಮೂಲಕ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ಸದ್ಯ ಪಾಶಾ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದೆ ಎಂದು ತಿಳಿದುಬಂದಿದೆ.Sign in to your account
Username or Email Address


Password

 Remember Me


