ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ರಾಯಭಾಗ ತಹಶೀಲ್ದಾರ್ ಕೆ.ಎನ್.ರಾಜಶೇಖರ್ ಮಾನವೀಯತೆಯನ್ನು ಮೆರದಿದ್ದಾರೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಬಳಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ರಾಜಶೇಖರ್ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಅಪಘಾತ ಕಂಡ ಕೂಡಲೇ ತಮ್ಮ ವಾಹನ ನಿಲ್ಲಿಸಿ ಸ್ಥಳೀಯ ವೈದ್ಯರನ್ನು ಕರೆಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.ಚಿಕಿತ್ಸೆ ಕೊಡಿಸಿದ ಬಳಿಕ ಹೊರಡದೇ ಅಂಬುಲೆನ್ಸ್ ಬರೊವರೆಗು ಕಾಯ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದ ನಂತರವೇ ತೆರಳಿದ್ದಾರೆ. ತಹಶೀಲ್ದಾರ ರಾಜಶೇಖರ್ ಅವರ ಕಾರ್ಯಕ್ಕೆ ಗ್ರಾಮದ ಜನರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.Sign in to your account
Username or Email Address


Password

 Remember Me


