ಬೀದರ್: ಮರ ಕಡಿಯುವಾಗ ಮಿಷನ್ ಕೈಕೊಟ್ಟಿದ್ದರಿಂದ ಸುಮಾರು 1 ಗಂಟೆಗಳ ಕಾಲ ಗರ್ಭಿಣಿ ಆಂಬುಲೆನ್ಸ್ ನಲ್ಲೇ ನರಳಾಟ ಅನುಭವಿಸಿರುವ ಘಟನೆ ಬೀದರ್ ತಾಲೂಕಿನ ಕೌಠೌ ಗ್ರಾಮದ ಬಳಿ ನಡೆದಿದೆ.ಕೌಠೌ ಗ್ರಾಮದ ಬಳಿ ಇರುವ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಂದು ಗಂಟೆಗಳ ಕಾಲ ಆಂಬುಲೇನ್ಸ್ ನಲ್ಲಿ ಗರ್ಭಿಣಿಯ ನರಳಾಟ ಅನುಭವಿಸುವ ಪರಿಸ್ಥಿತಿ ಉಂಟಾಗಿದೆ.ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿಯುವ ಮುನ್ನ ಮುನ್ನೆಚ್ಚರಿಕೆಯಾಗಿ ಜೆಸಿಬಿ ತರದೆ ಮರ ಕಡಿಯಲು ಹೋಗಿದ್ದಾರೆ. ಆದರೆ ಮರ ಕಡಿಯುತ್ತಿದ್ದಂತೆ ಮಿಷನ್ ಕೈಕೊಟ್ಟಿದೆ. ಇದರಿಂದ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಅದೇ ಮಾರ್ಗವಾಗಿ ಗರ್ಭಿಣಿಯೊಬ್ಬರು ಆಂಬುಲೆನ್ಸ್ ನಲ್ಲಿ ಹೆರಿಗೆಗಾಗಿ ಬೀದರ್ ಜಿಲ್ಲಾಸ್ಪತ್ರೆಗೆ ಹೋಗುತ್ತಿದ್ದರು. ಆದರೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅರ್ಧ ಕಿಲೋಮೀಟರ್ ದೂರದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ಗರ್ಭಿಣಿ ನರಳಾಟ ಅನುಭವಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಗರ್ಭಿಣಿಯ ನರಳಾಟ ನೋಡಿ ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗಳ ಜೊತೆ ಕೈ ಜೋಡಿಸಿ ರಸ್ತೆಯಲ್ಲಿದ್ದ ಮರವನ್ನು ಪಕಕ್ಕೆ ಸರಿಸಿ ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟು ಮಾನವೀಯತೆ ಮರೆದಿದ್ದಾರೆ. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳು  ಜೆಸಿಬಿ ತರಿಸಿ ರಸ್ತೆ ಕ್ಲೀನ್ ಮಾಡಿದ್ದಾರೆ.   






 Advertisement 




Sign in to your account
Username or Email Address


Password

 Remember Me


