ಬೆಂಗಳೂರು: ಮನೆಗಳ್ಳತನ ಹಾಗೂ ಸುಲಿಗೆ ಮಾಡುತ್ತಿದ್ದ ಐವರು ಕಳ್ಳರನ್ನು ಬಂಧಿಸಿ, ಅರ್ಧ ಕೆಜಿ ಗೂ ಹೆಚ್ಚಿನ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ನಗರದ ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದ್ದ ಸುಮಾರು ಮೂವತ್ತು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಸಿ.ವಿ. ವಿಶ್ವಾಸ್, ಗೌರೀಶ್, ಕುಮಾರ್, ಮರಿಯಪ್ಪ, ಗುಜರಿ, ಸತೀಶ ಹಾಗೂ ಮುರುಗ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳಿಂದ ಸುಮಾರು 502 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ನಗರದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಸುಲಿಗೆ, ಒಂಬತ್ತು ಮನೆ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.ಚಿನ್ನಾಭರಣ ಕಳೆದುಕೊಂಡ ಸಾರ್ವಜನಿಕರಿಗೆ ಇಂದು ಪೊಲೀಸರು ಅಭರಣಗಳನ್ನು ಹಿಂತಿರುಗಿಸಿದರು. ಈ ವೇಳೆ ಗ್ರಾಮಾಂತರ ಎಸ್ಪಿ ಅಮಿತ್ ಸಿಂಗ್ ಹೆಬ್ಬಗೋಡಿ ಸಿಪಿಐ ಜಗದೀಶ್ ಹಾಗೂ ಠಾಣಾ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


