ಚಿಕ್ಕಮಗಳೂರು: ಫೇಸ್ ಬುಕ್ ನಲ್ಲಿ ಬರೆದ ಸಂದೇಶದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂಭಾಗವೇ ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಹಲ್ಲೆ ನಡೆಸಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಬಿಜೆಪಿ ಕಾರ್ಯಕರ್ತ ರಾಕೇಶ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗಾಯಾಳು ರಾಕೇಶ್ ತನ್ನ ಫೇಸ್ ಬುಕ್ ನಲ್ಲಿ `ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರೇ, ಬೂತ್ ಮಟ್ಟದ ಕಾರ್ಯಕರ್ತರಾಗಿದ್ದ ನೀವು ಬಿಜೆಪಿಗೆ ಬಂದ ಮೂರೇ ತಿಂಗಳಲ್ಲಿ ಎಲ್ಲಾ ಅಧಿಕಾರ ಅನುಭವಿಸಿ ಇದೀಗ ಮತ್ತೆ ಕಾಂಗ್ರೆಸ್ ಸೇರಿ, ಉಂಡ ಮನೆಗೆ ದ್ರೋಹ ಬಗೆಯುತ್ತಿದ್ದೀರಾ ಎಂದು ಸಂದೇಶ ಹಾಕಿದ್ದರು. ಈ ಪೋಸ್ಟ್ ನೋಡಿದ ಕಾಂಗ್ರೆಸ್ ಕಾರ್ಯಕರ್ತ ರವೀಂದ್ರ, ಬಿಜೆಪಿ ಕಚೇರಿ ಮುಂಭಾಗದಲ್ಲೇ ರಾಕೇಶ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೇಳಲಾಗ್ತಿದೆ.ಎರಡೂ ಪಕ್ಷದ ಕಾರ್ಯಕರ್ತರ ಮಾತಿನ ಚಕಮಕಿ ಜೋರಾಗಿ ಕೈ-ಕೈ ಮಿಲಾಯಿಸುವ ಹಂತ ತಲುಪಿದಾಗ ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಲಾಠಿ ಪ್ರಹಾರದ ವೇಳೆ ಮತ್ತಿಬ್ಬರು ಕಾರ್ಯಕರ್ತರಿಗೂ ಕೂಡ ಗಾಯಗಳಾಗಿದ್ದು, ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕೊಪ್ಪ ಠಾಣೆ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು, ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.Sign in to your account
Username or Email Address


Password

 Remember Me


