ರಾಯಚೂರು: ಕಳೆದ ನಾಲ್ಕೂವರೆ ವರ್ಷಗಳಿಂದ ನಟಿ ಪೂಜಾಗಾಂಧಿ ರಾಯಚೂರಿನಲ್ಲಿ ಎದುರಿಸುತ್ತಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಿಂದ ಕೊನೆಗೂ ಮುಕ್ತಿ ಪಡೆದಿದ್ದಾರೆ.ರಾಯಚೂರಿನ ಜೆಎಂಎಫ್ ಸಿ 2ನೇ ನ್ಯಾಯಾಲಯದ ನ್ಯಾಯಾಧೀಶರಾದ ಪೂರ್ಣಿಮಾ ಯಾದವ್ ಸಾಕ್ಷ್ಯಾಧಾರ ಕೊರತೆಯಿಂದ ಪೂಜಾಗಾಂಧಿ ಖುಲಾಸೆಯಾಗಿದ್ದಾರೆ ಎಂದು ತೀರ್ಪು ಪ್ರಕಟಿಸಿದ್ದಾರೆ.ಏನಿದು ಪ್ರಕರಣ?
2013 ರಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಚುನಾವಣೆಯಲ್ಲಿ ಬಿಎಸ್‍ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಪೂಜಾ ಗಾಂಧಿ ಅನುಮತಿ ಇಲ್ಲದ ವಾಹನವನ್ನು ಚುನಾವಣಾ ಪ್ರಚಾರಕ್ಕೆ ಬಳಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರು. ಈ ಬಗ್ಗೆ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 5 ಬಾರಿ ವಿಚಾರಣೆಗೆ ಗೈರಾಗಿದ್ದ ಪೂಜಾ ಗಾಂಧಿಗೆ ವಾರೆಂಟ್ ಜಾರಿ ಮಾಡಲಾಗಿತ್ತು. ಅಂದಿನಿಂದಲೂ ಪೂಜಾಗಾಂಧಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಎದುರಿಸುತ್ತಿದ್ದರು.ಈ ಪ್ರಕರಣದ ಆರೋಪದಿಂದ ಈಗ ಪೂಜಾಗಾಂದಿ ಮುಕ್ತಿಯಾಗಿದ್ದಾರೆ ಎಂದು ಪೂಜಾಗಾಂಧಿ ಪರ ವಕೀಲ ನಾಗರಾಜ್ ನಾಯಕ ಹೇಳಿದ್ದಾರೆ. ತೀರ್ಪಿನಿಂದ ತುಂಬಾ ಖುಷಿಯಾಗಿದೆ. ಪ್ರಕರಣ ಮುಗಿದರೂ ರಾಯಚೂರಿಗೆ ಮತ್ತೆ ಮತ್ತೆ ಬರ್ತಿನಿ ಎಂದು ಪೂಜಾಗಾಂಧಿ ಹೇಳಿದ್ದಾರೆ. ಹೊಸ ವರ್ಷವನ್ನ ಪ್ರತಿ ದಿನದಂತೆ ಖುಷಿಯಾಗಿ ಸ್ವಾಗತಿಸುತ್ತೇನೆ. ನಾನು ಯಾವಾಗ ಮದುವೆ ಆಗುತ್ತೇನೆ ಆಗ ಹೇಳುತ್ತೇನೆ ಎಂದು ಪೂಜಾಗಾಂಧಿ ಹೇಳಿದರು.Sign in to your account
Username or Email Address


Password

 Remember Me


