ಬೆಂಗಳೂರು: ಬಿಜೆಪಿ ಮುಖಂಡನೋರ್ವ ಶಾಲೆಗೆ ನುಗ್ಗಿದ ಮುಖ್ಯ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ಸೋಮವಾರ ನಡೆದಿದೆ.ತಿಮ್ಮನಾಯಕನಹಳ್ಳಿ ನಿವಾಸಿಯಾಗಿರುವ ರಾಮಕೃಷ್ಣಪ್ಪ ಶಿಕ್ಷಕಿ ಮೇಲೆ ಹಲ್ಲೆಗೈದ ಬಿಜೆಪಿ ಮುಖಂಡ. ಯಲಹಂಕದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಆಶಾ, ರಾಮಕೃಷ್ಣಪ್ಪ ಬಳಿ ಸಾಲ ಪಡೆದಿದ್ದರು. ಸಾಲದ ಬಡ್ಡಿ ಹಣವನ್ನು ಪಡೆಯಲು ಶಾಲೆಗೆ ನುಗ್ಗಿದ ರಾಮಕೃಷ್ಣಪ್ಪ ಮಹಿಳೆ ಅಂತಾ ನೋಡದೇ ಕಪಾಳಮೋಕ್ಷ ಮಾಡಿದ್ದಾನೆ. ಈ ಎಲ್ಲ ದೃಶ್ಯಾವಳಿಗಳು ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಸಂಬಂಧ ಹಲ್ಲೆಗೊಳಗಾದ ಮುಖ್ಯ ಶಿಕ್ಷಕಿ ರಾಮಕೃಷ್ಣಪ್ಪ ವಿರುದ್ಧ ರಾಜನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ರಾಮಕೃಷ್ಣಪ್ಪ ಯಲಹಂಕ ಶಾಸಕ ವಿಶ್ವನಾಥ್ ಅವರ ಪರಮಾಪ್ತ ಎಂದು ಹೇಳಲಾಗಿದೆ. ಇನ್ನೂ ರಾಮಕೃಷ್ಣ ಪತ್ನಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದು, ರಾಜಕೀಯ ಪ್ರಭಾವದಿಂದಾಗಿ ಪೊಲೀಸರು ಇದುವರೆಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಅಂತ ಆರೋಪಿಸಲಾಗಿದೆ.ಇತ್ತ ಠಾಣೆಯಲ್ಲಿ ದೂರು ದಾಖಲಾದ ಬಳಿಕ ರಾಮಕೃಷ್ಣ ಪುತ್ರ ಜನಾರ್ದನ್ ಶಿಕ್ಷಕಿಗೆ ಕರೆ ಮಾಡಿ ದೂರನ್ನು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ.https://www.youtube.com/watch?v=scfpjJAMfScSign in to your account
Username or Email Address


Password

 Remember Me


