ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ ಐಟಿ ಅಧಿಕಾರಿಗಳ ಹೆಸರಲ್ಲಿ ದರೋಡೆ ನಡೆಸಿದ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ದರೋಡೆ ಮಾಡಿದ್ದ ವ್ಯಕ್ತಿಗೂ, ದೂರುದಾರ ಮಹಿಳೆ ನಡುವೆ ಅನೈತಿಕ ಸಂಬಂಧ ಇತ್ತು ಎನ್ನುವ ವಿಚಾರ ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.ಐಟಿ ಅಧಿಕಾರಿಗಳ ಹೆಸರಿನಲ್ಲಿ ದರೋಡೆ ನಡೆಸಿದ್ದ ಆರೋಪಿಗಳಾದ ಅಬ್ದುಲ್, ಮಹಮ್ಮದ್ ನಾಸಿರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಪೊಲೀಸರಿಗೆ ದರೋಡೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ನಾಸಿರ್ ಹಾಗೂ ಈ ಬಗ್ಗೆ ದೂರು ನೀಡಿದ್ದ ಮಹಿಳೆಗೂ ಐದು ವರ್ಷದಿಂದ ಪರಿಚಯ ಇತ್ತು ಎನ್ನುವ ಅಂಶ ತಿಳಿದು ಬಂದಿದೆ.ದರೋಡೆ ಕುರಿತು ಪೊಲೀಸರಿಗೆ ದೂರು ನೀಡುವ ವೇಳೆ ಮಹಿಳೆ ಆರೋಪಿಯ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಪೊಲೀಸರಿಗೆ ಮಾಹಿತಿ ತಿಳಿಸಿದರೆ ತನ್ನ ಅನೈತಿಕ ಸಂಬಂಧ ಬಯಲಾಗುತ್ತದೆ ಎಂಬ ಭಯದಲ್ಲಿ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎನ್ನಲಾಗಿದೆ.ಏನಿದು ಘಟನೆ?
ವಿದ್ಯಾರಣ್ಯಪುರದ ದೊಡ್ಡಬೊಮ್ಮಸಂದ್ರದಲ್ಲಿರೋ ಲಾವಣ್ಯ ಎಂಬವರ ಮನೆಯಲ್ಲಿ ಡಿಸೆಂಬರ್ 14 ರಾತ್ರಿ ದರೋಡೆ ನಡೆದಿತ್ತು. ರಾತ್ರಿ ವೇಳೆ ಮನೆಗೆ ನುಗ್ಗಿದ ಆರೋಪಿಗಳು ನಾವು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಎಂದು ಹೇಳಿ ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ಲಾವಣ್ಯ ಅವರ ಮಗ ಜಗನ್ ಕೈಕಾಲು ಕಟ್ಟಿ ದರೋಡೆ ಮಾಡಿದ್ದರು. ಈ ವೇಳೆ ಲಾವಣ್ಯ ಮನೆಗೆ ಬಂದಿದ್ದು, ಆರೋಪಿಗಳನ್ನು ನೋಡಿದ್ದರು. ಆದರೆ ಈ ಕುರಿತು ವಿದ್ಯಾರಣ್ಯಪುರದ ಪೊಲೀಸರಿಗೆ ದೂರು ನೀಡುವ ವೇಳೆ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ.ವಿವೇಕ್ ನಗರದ ಪೊಲೀಸರು ವಾಹನ ತಪಾಸಣೆ ನಡೆಸುವ ವೇಳೆ ಆರೋಪಿಗಳ ಬಗ್ಗೆ ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅರೋಪಿ ನಾಸಿರ್ ಲಾವಣ್ಯ ಅವರ ಜೊತೆಗಿನ ಸಂಬಂಧದ ಬಗ್ಗೆ ಸತ್ಯಾಂಶ ತಿಳಿಸಿದ್ದಾನೆ. ಇಬ್ಬರ ನಡುವೆ ಹಣದ ವ್ಯವಹಾರ ನಡೆದಿದ್ದು, ಈ ಹಿಂದೆಯು ಲಾವಣ್ಯ ಅವರ ಮನೆಯಲ್ಲಿ ದರೋಡೆಗೆ ಯತ್ನಿಸಿ ವಿಫಲನಾಗಿದ್ದ. ಈ ವೇಳೆಯೇ ಲಾವಣ್ಯ ಅವರಿಗೆ ದರೋಡೆ ನಡೆಸುವ ಕುರಿತು ಅನುಮಾನ ವ್ಯಕ್ತವಾಗಿತ್ತು ಎನ್ನಲಾಗಿದೆ.https://www.youtube.com/watch?v=3sFZqSht4I8Sign in to your account
Username or Email Address


Password

 Remember Me


