ರಾಮನಗರ: ಇನ್ಮುಂದೆ ರಾಮನಗರ ಜಿಲ್ಲೆ ಇರೋದಿಲ್ಲ, ಇದನ್ನು ಬೆಂಗಳೂರು (Bengaluru) ಜಿಲ್ಲೆಯಾಗಿ ಮರುನಾಮಕರಣ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.ಕನಕಪುರದ ವೀರಭದ್ರಸ್ವಾಮಿ ದೇವಸ್ಥಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ಮುಂದೆ ರಾಮನಗರ (Ramanagara) ಜಿಲ್ಲೆ ಇರೋದಿಲ್ಲ. ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಯಾರೋ ಹೆಸರು ಮಾಡಿಕೊಳ್ಳಬೇಕು ಅಂತಾ ರಾಮನಗರ ಜಿಲ್ಲೆ ಮಾಡಿದ್ರು. ಮತ್ತೆ ರಾಮನಗರವನ್ನು ಬೆಂಗಳೂರು ಜಿಲ್ಲೆಯಾಗಿ ಮರುನಾಮಕರಣ ಮಾಡುತ್ತೇನೆ ಎಂದರಲ್ಲದೇ ರಾಮನಗರ ಇಲ್ಲ.. ಬೆಂಗಳೂರು ಅಷ್ಟೇ ಎಂದು ದೇವರ ಮೇಲೆ ಪ್ರಮಾಣ ಮಾಡಿದ್ದಾರೆ. ಇದನ್ನೂ ಓದಿ: ‘ಸಲಿಂಗ ವಿವಾಹ’ ಪುರಾಣ; ಭಾರತದಲ್ಲಿ ಅನುಮತಿ ಯಾಕಿಲ್ಲ? – ಯಾವ್ಯಾವ ದೇಶಗಳಲ್ಲಿ ಸಿಕ್ಕಿದೆ ಮಾನ್ಯತೆ?ಇದೇ ವೇಳೆ ರೈತರು ಭೂಮಿ ಮಾರಾಟ ಮಾಡದಂತೆ ತಾಕೀತು ಮಾಡಿದ ಡಿಕೆಶಿ, ಒಂದೊಂದು ಅಡಿ ಲೆಕ್ಕದಲ್ಲಿ ಭೂಮಿ ಬೆಲೆ ಹೆಚ್ಚಾಗುತ್ತೆ. ನೀವು ರಾಮನಗರದವರಲ್ಲ, ನೀವು ಬೆಂಗಳೂರು ಜಿಲ್ಲೆಯವರು. ಸುಮ್ನೆ ನಮ್ಮನ್ನ ರಾಮನಗರ ಅಂತ ಹೇಳಿ ಮೂಲೆಗೆ ತಳ್ಳಬೇಡಿ ಎಂದು ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಕಾರಾಗೃಹದ ಮೇಲೆ ದಾಳಿ – ತಪಾಸಣೆ ನಡೆಸಿದ ಪೊಲೀಸರಿಗೆ ಸಿಕ್ಕಿದ್ದೇನು?ಗ್ರಾಮಾಂತರನೂ ಅಲ್ಲ, ಬೆಂಗಳೂರು ಜಿಲ್ಲೆಯವರು. ದೇವರ ಸನ್ನಿಧಿಯಲ್ಲೀ ವಿಜಯದಶಮಿ ದಿನ ಈ ಮಾತನ್ನು ಹೇಳ್ತಿದ್ದೀನಿ, ಆ ಕೆಲಸ ಮಾಡೇ ಮಾಡುತ್ತೇನೆ. ರಾಮನಗರ ಬೆಂಗಳೂರು ಆಗುತ್ತೆ. ರೈತರು ಯಾರೂ ಭೂಮಿಯನ್ನು ಮಾರಾಟ ಮಾಡ್ಬೇಡಿ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ನಮ್ಮನ್ನು ಕ್ಷಮಿಸಿಬಿಡಿ ಪಾಕಿಸ್ತಾನ – ಅಫ್ಘಾನ್‌ ವಿರುದ್ಧ ಸೋಲಿನ ಬಳಿಕ ಅಬ್ದುಲ್ಲಾ ಶಫೀಕ್ ಭಾವುಕ ಟ್ವೀಟ್‌Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


