ಹುಬ್ಬಳ್ಳಿ: ಆಸ್ತಿಗಾಗಿ ಹೆತ್ತ ತಾಯಿಯೇ ಮಗನನ್ನು ಕೊಲೆ ಮಾಡಿರೋ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ನಗರದ ಅರಳಿಕಟ್ಟೆ ಕಾಲೋನಿಯ 30 ವರ್ಷದ ಇಮ್ರಾನ್ ನೂರ್ ಅಹ್ಮದ್ ಕೊಲೆಯಾದ ದುರ್ದೈವಿ. ತಾಯಿ ಮೌಸಂಬಿ ಹಾಗೂ ಸಂಬಂಧಿಕರು ಆಸ್ತಿಯಲ್ಲಿ ಪಾಲು ಕೇಳಿದಕ್ಕೆ ಇಮ್ರಾನ್ ನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಪತ್ನಿಯ ಸಂಬಂಧಿಕರು ಆರೋಪಿಸಿದ್ದಾರೆ. ಇಮ್ರಾನ್ ನನ್ನು ಮನೆಯಲ್ಲಿಯೇ ಕತ್ತು ಹಿಸುಕಿ ಕೊಲೆ ಮಾಡಿ ನಂತರ ಸಹಜ ಸಾವು ಎಂದು ಬಿಂಬಿಸಲಾಗಿತ್ತು.ಹಾಗಾಗಿ ಮೃತನ ಪತ್ನಿಯ ಸಂಬಂಧಿಕರು ಶಹರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಶವವನ್ನು ಪರೀಕ್ಷೆಗೆ ಒಳಪಡೆಸಲಾಗಿದೆ.Sign in to your account
Username or Email Address


Password

 Remember Me


