ಬೆಂಗಳೂರು: ತನ್ನ ಸಹೋದ್ಯೋಗಿಯ ಹತ್ಯೆಗೆ ಸುಪಾರಿ ನೀಡಿದ್ದ ಆರೋಪದ ಮೇಲೆ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆಯವರನ್ನು ಬಂಧಿಸಲಾಗಿದ್ದು, ಎರಡನೆಯ ದಿನವನ್ನೂ ಕೂಡ ಅವರು ಸಿಸಿಬಿ ಕಚೇರಿಯಲ್ಲೇ ಕಳೆದಿದ್ದಾರೆ.ಶನಿವಾರ ರಾತ್ರಿ 8:30ರ ಸುಮಾರಿಗೆ ರವಿ ಬೆಳೆಗೆರೆ ವಿಚಾರಣೆ ಮುಕ್ತಾಯವಾಗಿದೆ. ನಂತರ ಮನೆಯಿಂದ ತಂದ ಊಟ ಮಾಡಿ, ಕಚೇರಿಯಲ್ಲಿದ್ದ ಬೆಡ್‍ನಲ್ಲಿ ಮಲಗಿದ್ದಾರೆ. ಮಲಗುವ ಮುನ್ನ ಪೆನ್ನು, ಪೇಪರ್ ಪಡೆದು ಇಡೀ ದಿನ ಏನೇನು ನಡೆಯಿತ್ತು ಎಂಬುದರ ಬಗ್ಗೆ ಬರೆದಿದ್ದಾರೆ.ಇದನ್ನೂ ಓದಿ: ಸಿಸಿಬಿ ಕಸ್ಟಡಿಯಲ್ಲಿ ನಿದ್ದೆ ಬಾರದೇ ಮೊದಲ ರಾತ್ರಿ ಕಳೆದ ರವಿ ಬೆಳಗೆರೆ- ಪೇಪರ್ ನಲ್ಲಿ ಏನೇನೋ ಗೀಚಿದ್ರುಕಾಲುನೋವಿನಿಂದ ನಿದ್ದೆ ಬಾರದೆ ಪರದಾಡಿದ ಬೆಳಗೆರೆ ಆಗಾಗ ಎದ್ದು ಸಿಗರೇಟ್ ಸೇದಿದ್ದರು. ಅಂತೆಯೇ ನಸುಕಿನ ಜಾವ ಸುಮಾರು 3 ಗಂಟೆ ಸುಮಾರಿಗೆ ನಿದ್ದೆಗೆ ಜಾರಿದ್ರು ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಸಿಸಿಬಿ ಪೊಲೀಸರ ಮೊದಲ ಪ್ರಶ್ನೆ ಕೇಳಿ ಮಧ್ಯರಾತ್ರಿ ಬೆಚ್ಚಿಬಿದ್ದ ರವಿ ಬೆಳಗೆರೆಇಂದು 9 ಗಂಟೆಯ ಬಳಿಕ ಎಸಿಪಿ ಸುಬ್ರಮಣ್ಯ ನೇತೃತ್ವದಲ್ಲಿ ರವಿಬೆಳಗೆರೆ ವಿಚಾರಣೆ ನಡೆಯಲಿದೆ. ವಿಚಾರಣೆ ಬಳಿಕ ಸ್ಥಳ ಮಹಜರ್ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ರವಿ ಬೆಳೆಗೆರೆ ಆರೋಗ್ಯದ ಸ್ಥಿತಿ ನೋಡಿಕೊಂಡು ಮಹಜರ್ ಮಾಡಲು ನಿರ್ಧಾರ ಮಾಡಿದ್ದಾರೆ. ರವಿ ಕಚೇರಿ, ಮನೆ ಮತ್ತು ಸುನೀಲ್ ಹೆಗ್ಗರವಳ್ಳಿ ಮನೆ ಬಳಿ ಮಹಜರ್ ಸಾಧ್ಯತೆ ಇದೆ ಎನ್ನಲಾಗಿದೆ.   ಇದನ್ನೂ ಓದಿ: ರವಿ ಬೆಳಗೆರೆಗೆ ಸಿಗರೇಟ್ ಕೊರತೆಯಂತೆ!ಇತ್ತ ಪತ್ರಿಕರ್ತ ಸುನೀಲ್ ಹೆಗ್ಗರವಳ್ಳಿ ಕೂಡ ಇಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಲಿದ್ದು, ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳಿಗೆ ಹೇಳಿಕೆ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.






 Advertisement 




Sign in to your account
Username or Email Address


Password

 Remember Me


