– ಹಲ್ಲೆ ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ತಾಯಿಯೇ ಮಕ್ಕಳ ಮೇಲೆ ದೊಣ್ಣೆಯಿಂದ ಹಲ್ಲೆಗೈದು ಮಗಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಶರಣಾದ ಘಟನೆ ಹರಪ್ಪನಹಳ್ಳಿ (Harapanahalli) ತಾಲ್ಲೂಕಿನ ಹುಲಿಕಟ್ಟೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯ ಮತ್ತೋರ್ವ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಬೇಗಮ್ ಎಂಬಾಕೆ ತನ್ನ ಮಕ್ಕಳಾದ ಶಮಬಾನು ಹಾಗೂ ಮಗ ಅಮಾನುಲ್ಲಾ ಮೇಲೆ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮಗ ಅಮಾನುಲ್ಲಾ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ. ಇದನ್ನೂ ಓದಿ: ಟಿವಿ ರಿಮೋಟ್‌ಗಾಗಿ ಅಣ್ಣ-ತಮ್ಮಂದಿರ ಕಿತ್ತಾಟ; ತಂದೆಯಿಂದ ಮಗನ ಹತ್ಯೆಕೂಲಿ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ ಬೇಗಮ್, ಕ್ಷುಲ್ಲಕ ಕಾರಣಕ್ಕೆ ಮಕ್ಕಳೊಂದಿಗೆ ಜಗಳ ಮಾಡಿದ್ದಾಳೆ. ಅದೇ ಸಿಟ್ಟಿನಲ್ಲಿ ತಡರಾತ್ರಿ ಮಲಗಿದ್ದ ಇಬ್ಬರೂ ಮಕ್ಕಳ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾಳೆ.ಯಾವಾಗಲೂ ಅವರ ಮನೆಯಲ್ಲಿ ಜಗಳವಾಗುತ್ತಿತ್ತು. ಕಳೆದ ರಾತ್ರಿ ಕೂಡ ಅದೇ ರೀತಿ ಜಗಳವಾಡಿರಬಹುದು ಎಂದು ಈ ಬಗ್ಗೆ ಸ್ಥಳೀಯರು ಪ್ರತಿಕ್ರಿಯಿಸಿದ್ದಾರೆ. ಬೆಳಗ್ಗೆ ಎಷ್ಟೊತ್ತಾದರೂ ಬಾಗಿಲು ತೆರೆಯದ ಹಿನ್ನೆಲೆ ಅನುಮಾನಗೊಂಡ ಸಂಬಂಧಿಕರು ಮನೆ ಒಳಗೆ ನೋಡಿದಾಗ ಈ ವಿಚಾರ ತಿಳಿದಿದೆ. ಬಳಿಕ ಗಾಯಗೊಂಡು ನರಳುತ್ತಿದ್ದ ಅಮಾನುಲ್ಲನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ವಿಜಯನಗರ (vijayanagar) ಎಸ್‍ಪಿ ಶ್ರೀಹರಿಬಾಬು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹರಪ್ಪನಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 15 ವರ್ಷದಲ್ಲಿ ಒಮ್ಮೆಯೂ ತವರಿಗೆ ಕಳುಹಿಸದೆ ಕಿರುಕುಳ – ವಿಷ ಕುಡಿಸಿ ಪತ್ನಿಯ ಕೊಂದ ದುರುಳ ಪತಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


