ಚಿಕ್ಕಬಳ್ಳಾಪುರ: ಮಂತ್ರವಾದಿಯೊಬ್ಬ ಕೊಟ್ಟ ನಾಟಿ ಔಷಧಿ ಸೇವಿಸಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ (Chikkaballapura) ನಲ್ಲಗುಟ್ಟಪಾಳ್ಯ ಗ್ರಾಮದಲ್ಲಿ ನಡೆದಿದೆ. ಅಲ್ಲದೇ ಔಷಧಿ ಸೇವಿಸಿದ ಬಾಲಕನ ತಂದೆ ಹಾಗೂ ಸಹೋದರಿಯನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ.ಗ್ರಾಮದ ಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿ ಮಗ ವೇದೇಶ್ (7) ಮೃತ ಬಾಲಕ. ಮಗು ನಾಟಿ ಔಷಧಿ ಕಹಿ ಎಂದು ಕುಡಿಯಲು ಹಿಂದೇಟು ಹಾಕಿದ್ದಾಗ ತಂದೆ ತಾನು ಸ್ವಲ್ಪ ಕುಡಿದು ಮಗುವಿಗೆ ನಂತರ ಕುಡಿಸಿದ್ದಾನೆ. ಇದರಿಂದ ತಂದೆ ಶ್ರೀನಿವಾಸ್ ಸಹ ಅಸ್ವಸ್ಥನಾಗಿದ್ದಾನೆ. ಅಲ್ಲದೇ ಆತನ ಇನ್ನೋರ್ವ ಪುತ್ರಿ ವೈಶಾಲಿಗೂ ಸಹ ದಪ್ಪ ಆಗಲು ಬೇರೊಂದು ಔಷಧಿಯನ್ನು ನೀಡಲಾಗಿದೆ. ಇದರಿಂದ ಆಕೆ ಅಸ್ವಸ್ಥಳಾಗಿದ್ದಾಳೆ. ಅಸ್ವಸ್ಥರಾಗಿರುವ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಹಿರಿಯ ಪತ್ರಕರ್ತ ಕೆ.ಎಸ್ ಸಚ್ಚಿದಾನಂದ ಮೂರ್ತಿ ನಿಧನ- ಸಿಎಂ ಸಂತಾಪಮೃತ ಬಾಲಕ ವೇದೇಶ್‍ಗೆ ದೇಹದ ಮೇಲೆ ಗುಳ್ಳೆಗಳಾಗಿದ್ದವು. ಇದಕ್ಕೆ ವ್ಯಕ್ತಿಯೊಬ್ಬ ಸಲಹೆ ನೀಡಿದ್ದು, ಭೋಯಿನಹಳ್ಳಿ ಗ್ರಾಮದ ಸತ್ಯನಾರಾಯಣ ಎಂಬವರ ಬಳಿ ಔಷಧಿ ಪಡೆದಿದ್ದರು. ಔಷಧಿ ಕುಡಿದ 15 ನಿಮಿಷದಲ್ಲಿ ಬಾಲಕ ತೀವ್ರ ಅಸ್ವಸ್ಥನಾಗಿದ್ದಾನೆ. ಒದ್ದಾಡಿ ಮೂರ್ಛೆ ಹೋಗಿದ್ದಾನೆ. ಬಳಿಕ ಔಷಧ ನೀಡಿದವನಿಗೆ ಕರೆ ಮಾಡಿದ್ದಾರೆ. ಆತ ಆಸ್ಪತ್ರೆಗೆ ಹೋಗುವುದು ಬೇಡ, ಸರಿಯಾಗುತ್ತದೆ ಎಂದು ಹೇಳಿದ್ದಾನೆ. ಆದರೆ ಬಾಲಕನ ಸ್ಥಿತಿ ತೀರಾ ಹದಗೆಟ್ಟಾಗ ಆಸ್ಪತ್ರೆಗೆ ಕರೆದೊಯ್ಯುವ ಸಿದ್ಧತೆ ಮಾಡಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.ಈ ಬಗ್ಗೆ ವೈದ್ಯರು ಪರೀಕ್ಷೆ ನಡೆಸುತ್ತಿದ್ದು, ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಇದನ್ನೂ ಓದಿ: ಮುರುಡೇಶ್ವರದ ಕಡಲಲ್ಲಿ ಅಲೆಗಳಿಗೆ ಸಿಲುಕಿದ್ದ ಮೂವರ ರಕ್ಷಣೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


