ಯಾದಗಿರಿ: ಮಹಿಷಾ ದಸರಾ (Mahisha Dasara) ಆಚರಣೆ ಭಾರತೀಯ ಹಾಗೂ ಹಿಂದೂ ಸಂಸ್ಕೃತಿಗೆ ಅಪಮಾನ ಮಾಡಲು ಷಡ್ಯಂತ್ರ ಮಾಡುವ ಹುನ್ನಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಿಡಿಕಾರಿದ್ದಾರೆ.ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಸಂಸ್ಕೃತಿಯನ್ನು ಅವಮಾನಿಸಲು ಕೆಲವು ಸಂಘಟನೆಗಳು ಹುಟ್ಟಿಕೊಂಡಿವೆ. ಮೈಸೂರು (Mysuru) ನಾಡ ದೇವತೆ ಚಾಮುಂಡಿಯ ಪವಿತ್ರ ಸ್ಥಳ. ಹಿಂದೆ ಮಹಾರಾಜರ ಕಾಲದಲ್ಲಿ ಚಾಮುಂಡಿಯ ಆಶೀರ್ವಾದ ಪಡೆದು ದಸರಾ ಉತ್ಸವ ಆಚರಣೆ ಮಾಡುತ್ತಿದ್ದರು. ಅದೇ ಪರಂಪರೆಯನ್ನು ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಆಚರಣೆ ಮಾಡಿಕೊಂಡು ಬಂದಿವೆ. ಈಗ ಪಕ್ಷದ ವತಿಯಿಂದ ಯಾವುದು ನಡೆಯುತ್ತಿಲ್ಲ. ಸರ್ಕಾರದ ವತಿಯಿಂದ ನಡೆಯುತ್ತಿರುವುದು. ದಸರಾ ಉತ್ಸವವನ್ನು ಸಿಎಂ ಉದ್ಘಾಟನೆ ಮಾಡುತ್ತಾರೆ. ಇದಕ್ಕೆ ಸರ್ಕಾರ ಹಣ ನೀಡುತ್ತದೆ. ಇಂತಹ ಉತ್ಸವವನ್ನು ವಿಕೃತಿಯಾಗಿ ತೋರಿಸಲು ವ್ಯವಸ್ಥಿತ ವ್ಯಕ್ತಿಗಳು ಹಾಗೂ ಸಂಘಟನೆಗಳು ದೇಶದಾದ್ಯಂತ ಕೆಲಸ ಮಾಡುತ್ತಿವೆ. ಅದರಲ್ಲಿ ಮೈಸೂರಿನ ಮಹಿಷಾಸುರ ಉತ್ಸವವೂ ಒಂದಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮುರುಡೇಶ್ವರದ ಕಡಲಲ್ಲಿ ಅಲೆಗಳಿಗೆ ಸಿಲುಕಿದ್ದ ಮೂವರ ರಕ್ಷಣೆಮಹಿಷಾಸುರ ಉತ್ಸವಕ್ಕೆ ಯಾವ ರೀತಿ ಅನುಮತಿ ಕೊಟ್ಟಿದ್ದೀರಿ? ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಯಾವುದೇ ರೀತಿಯ ಬಿಗಿ ಕ್ರಮ ಇಲ್ಲದಂತಾಗಿದೆ. ಶಿವಮೊಗ್ಗದ ಘಟನೆಯನ್ನು ಉಲ್ಲೇಖಿಸಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಯಾರನ್ನು ವೈಭವಿಕರಿಸಿದ್ದರು? ಅಲ್ಲಿ ವೈಭವಿಕರಿಸಿದ್ದು ಔರಂಗಜೇಬ್ ಹಾಗೂ ಆತನ ಕತ್ತಿಯನ್ನು. ಹಿಂದೂಗಳ ರಕ್ತ ತೆಗೆದುಕೊಳ್ಳುತ್ತದೆ ಎಂಬ ಆ ಕತ್ತಿಯನ್ನು ಹಾಗೂ ಟಿಪ್ಪುವನ್ನು ವೈಭವಿಕರಿಸಿದ್ದರು. ಗಲಾಟೆಯಾದ ಸಂದರ್ಭದಲ್ಲಿ ಹಿಂದೂ ಹೆಣ್ಣುಮಕ್ಕಳ ಎದೆಗೆ ಕೈಹಾಕಿದ್ದರು. ಹೆಣ್ಣುಮಕ್ಕಳು ಕಣ್ಣೀರು ಹಾಕಿದ್ದರು. ಹಿಂದೂ ಹೆಣ್ಣು ಮಕ್ಕಳ ಮನೆ ಪುಡಿ ಮಾಡಿದ್ದರು. ಇದನ್ನು ಹೇಳಿಕೊಳ್ಳಲಾಗದೇ ಹೆಣ್ಣು ಮಕ್ಕಳು ಕಣ್ಣೀರು ಹಾಕಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಕೊಲೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


