ಯಾದಗಿರಿ: ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಂದೋಲದ ಸಿದ್ದಲಿಂಗ ಶ್ರೀ (Andola Shree) ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.ಯಾದಗಿರಿಯ (Yadagiri) ಶಹಾಪುರ ನಗರದಲ್ಲಿ ಅ.3 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕೆ ಆಂದೋಲಶ್ರೀ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ 295a, 153 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಹಿಂದೂಗಳನ್ನು ಕೆಣಕಿದ್ರೆ ಕರ್ನಾಟಕ ಎರಡನೇ ಗೋದ್ರಾ ಆಗುತ್ತೆ- ಆಂದೋಲಶ್ರೀ ವಿವಾದಾತ್ಮಕ ಹೇಳಿಕೆಕೋಮು ಸೌಹಾರ್ದತೆಗೆ ಧಕ್ಕೆ, ಪ್ರಚೋದನೆ ಹಾಗೂ ಅನ್ಯ ಧರ್ಮೀಯರ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ‘ನಿಮ್ಮ ಹತ್ತಿರ ತಲ್ವಾರ್ ಇರಬಹುದು. ಆ ತಲ್ವಾರ್‌ನಿಂದ ನಮ್ಮನ್ನ ಎದುರಿಸೋಕೆ ಬಂದರೆ, ನಮ್ಮಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಖಡ್ಗ ಇದೆ. ಛತ್ರಪತಿ ಶಿವಾಜಿ ಮಹಾರಾಜರ ಖಡ್ಗ ಇದೆ. ಏಕ್ ಮಾರ್ ದೋ ತುಕಡಾ’ ಎಂದು ಆಂದೋಲಶ್ರೀ ಹೇಳಿಕೆ ನೀಡಿದ್ದರು.ಹೊಡೆದರೆ ಒಂದು ದೇಹ ಪಾಕಿಸ್ತಾನಕ್ಕೆ ಹೋಗಬೇಕು. ಇನ್ನೊಂದು ದೇಹ ಬಾಂಗ್ಲಾದೇಶಕ್ಕೆ ಹೋಗಬೇಕು. ಹಿಂದುಗಳನ್ನು ಕೆಣಕಬೇಡಿ. ಹಿಂದೂಗಳನ್ನ ಕೆಣಕಿದರೆ ಕರ್ನಾಟಕ ಎರಡನೇ ಗೋದ್ರಾ ಆಗುತ್ತದೆ ಎಂದು ವಿವಾದಾತ್ಮಕ ಭಾಷಣ ಮಾಡಿದ್ದರು. ಇದನ್ನೂ ಓದಿ: ಅಪ್ರಾಪ್ತರಿಗೆ ವಾಹನ ಕೊಟ್ರೆ ಪೋಷಕರಿಗೆ ಬೀಳುತ್ತೆ 25,000 ರೂ. ದಂಡ, 3 ವರ್ಷ ಜೈಲು ಶಿಕ್ಷೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


