ಮೈಸೂರು: ಮಹಿಷಾ ದಸರಾ (Mahisha Dasara) ಒಂದು ರೀತಿ ಅಸಹ್ಯ, ಅನಾಚಾರ. ಮಹಿಷಾ ದಸರಾ ಮೂಲಕ ದೆವ್ವವನ್ನು ದೇವರು ಮಾಡಲು ಹೊರಟ್ಟಿದ್ದಾರೆ. ಮಹಿಷಾ ದಸರಾ ಆಸ್ತಿಕರ ಭಾವನೆಗೆ ನೋವು ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಕಿಡಿಕಾರಿದ್ದಾರೆ.ನಾಡಹಬ್ಬದ ಹಿನ್ನೆಲೆ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿ (Chamundi Hill) ಮಹಿಷಾಸುರನ ಪ್ರತಿಮೆ ಮುಂದೆ ಮಹಿಷಾ ದಸರಾ ಆಯೋಜನೆ ಮಾಡಲಾಗಿದೆ. ಇದಕ್ಕೆ ತಿರುಗೇಟಾಗಿ ಬಿಜೆಪಿ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದೆ. ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದೆ.ಮಹಿಷಾ ದಸರಾ ವಿರೋಧಿಸಿ ಮಾತನಾಡಿರುವ ಪ್ರತಾಪ್ ಸಿಂಹ, ಬಿಜೆಪಿ (BJP) ಸರ್ಕಾರದಲ್ಲಿ ಮಹಿಷಾ ದಸರಾ ಎಂಬ ಅಸಹ್ಯವನ್ನು ನಿಲ್ಲಿಸಿದ್ದೆವು. ಈಗ ಸಿದ್ದರಾಮಯ್ಯ ಸರ್ಕಾರ ಮತ್ತೆ ಮಹಿಷಾ ದಸರಾ ಮಾಡಲು ಹೊರಟಿದೆ. ಅಕ್ಟೋಬರ್ 13 ರಂದು ಚಲೋ ಚಾಮುಂಡಿ ಬೆಟ್ಟ ಮಾಡುತ್ತೇವೆ. ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಆರಂಭವಾಗುತ್ತದೆ. ಕನಿಷ್ಠ 5,000 ಜನ ಈ ಜಾಥಾದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಈದ್‌ ಮಿಲಾದ್‌ ಹಬ್ಬಕ್ಕೆ 5 ಕೋಟಿ ಸಂಗ್ರಹ – ಫಂಡಿಂಗ್‌ ಮಾಡಿದವರ ಹಿಂದೆ ಬಿದ್ದ ಖಾಕಿಇದು ಬಿಜೆಪಿ ಕಾರ್ಯಕ್ರಮವಲ್ಲ. ಇದು ಮೈಸೂರಿನ ಜನರ ಜಾಥಾ. ಅಕ್ಟೋಬರ್ 13 ರಂದು ಮಹಿಷಾ ದಸರಾ ತಡೆಯುವುದೇ ನಮ್ಮ ಜಾಥಾದ ಉದ್ದೇಶ. ಇದು ಪಕ್ಷಾತೀತ ಹೋರಾಟ. ನಾವು ಸಂಘರ್ಷಕ್ಕೂ ಸಿದ್ಧರಿದ್ದೇವೆ. ಅಕ್ಟೋಬರ್ 13 ರಂದು ಚಾಮುಂಡಿಗೆ ಅವಮಾನ ಮಾಡಿ, ಅಕ್ಟೋಬರ್ 15 ರಂದು ಚಾಮುಂಡಿ ತಾಯಿಗೆ ಪೂಜೆ ಮಾಡಿದರೆ ಅದು ಅನೈತಿಕ ಕೆಲಸ. ಮಹಿಷಾ ದಸರಾ ಎಂಬ ಅನಾಚಾರ ನಡೆಯಕೂಡದು ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. ಇದನ್ನೂ ಓದಿ: 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


