ಬಳ್ಳಾರಿ: ರಾಜಕೀಯದಲ್ಲಿ ನೆಲೆ ಕಾಣಲು ಮತ್ತೆ ಯತ್ನಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿಯಿಂದ ದೂರವಾಗಲಿದ್ದರೆ ಎಂಬ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.ರಾಜಕೀಯವಾಗಿ ಪುನರ್ಜನ್ಮ ನೀಡಿದ್ದ ಬಳ್ಳಾರಿಯಿಂದ ಜನಾರ್ದನ ರೆಡ್ಡಿ ದೂರವಾಗಲು ಬಯಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಳ್ಳಾರಿಯಿಂದ ಚುನಾವಣೆಗೆ ಸ್ಪರ್ಧಿಸಿದ್ರೆ ಗೆಲುವು ಸಾಧಿಸುವ ಸಾಧ್ಯತೆ ಕಡಿಮೆ ಇರುವುದರಿಂದ, ರೆಡ್ಡಿಗಳ ಪ್ರಾಬಲ್ಯ ಹೆಚ್ಚಾಗಿರುವ ಚಿಕ್ಕಬಳ್ಳಾಪುರ ಅಥವಾ ಬಾಗೇಪಲ್ಲಿಯಿಂದ ಕಣಕ್ಕಿಳಿಯಲು ಆಲೋಚಿಸಿದ್ದಾರೆ ಎನ್ನಲಾಗಿದೆ.ಇತ್ತಿಚೀಗೆ ಇದಕ್ಕೆ ಪೂರಕ ಎನ್ನುವಂತೆ ಬಾಗೇಪಲ್ಲಿಯ ಲಕ್ಷೀ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. Sign in to your account
Username or Email Address


Password

 Remember Me


