ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರ ಮಳೆಯಾಗಿದೆ.ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ ವೇಳೆ ಸಿಡಿಲು ಬಡಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ಮನೆಯ ಛಾವಣಿ ಹಾರಿಹೋಗಿ ಬಾಲಕನ ಮೇಲೆ ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.ಇತ್ತ ತುಮಕೂರಿನ ಮಧುಗಿರಿಯಲ್ಲೂ ಜೋರು ಮಳೆಯಾಗಿದೆ. ಮಳೆ ವೇಳೆ ಬೃಹತ್ ಮರವೊಂದು ನೆಲಕ್ಕುರುಳಿ ಕಾರು ಸಂಪೂರ್ಣ ಜಖಂಗೊಂಡಿದೆ. ತುಮಕೂರು ನಗರದಲ್ಲಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಬಿದ್ದಿದೆ. ಮತ್ತೊಂದೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಹಾಸನ, ಚಿತ್ರದುರ್ಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಯಲ್ಲಿ ಗುಡುಗು ಸಹಿತ ಮಳೆಯಾಗಿದೆ. ಹಾವೇರಿಯಲ್ಲಿ ಕೂಡ ಧಾರಾಕಾರ ಮಳೆಯಾಗಿದೆ.Sign in to your account
Username or Email Address


Password

 Remember Me


