ಬೆಂಗಳೂರು: ಕ್ಯಾಂಪಸ್ ಸೆಲೆಕ್ಷನ್ ನಲ್ಲಿ ಕೆಲಸ ಸಿಗದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ಬನಶಂಕರಿ 3 ನೇ ಹಂತದ ದ್ವಾರಕಾನಗರದಲ್ಲಿ ನಡೆದಿದೆ.ಪಿಇಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಅರ್ಪಿತ್(21) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಗಳವಾರ ಸಂಜೆ ಮನೆಯಲ್ಲಿ ಯಾರು ಇಲ್ಲದಿದ್ದಾಗ ನೇಣಿಗೆ ಶರಣಾಗಿದ್ದಾನೆ.ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಅರ್ಪಿತ್ ಎಂಜಿನಿಯರಿಂಗ್ ನಲ್ಲಿ ಚಿನ್ನದ ಪದಕ ಪಡೆದ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಮೆರಿಕಕ್ಕೆ ಪ್ರಾಜೆಕ್ಟ್ ಮಾಡಲು ಕಳುಹಿಸಿಕೊಟ್ಟಿತ್ತು.ಸ್ನೇಹಿತರಿಗೆ ಕಂಪೆನಿಗಳಲ್ಲಿ ಕೆಲಸ ಸಿಕ್ಕಿದ್ದರೂ ತನಗೆ ಕೆಲಸ ಸಿಗದ ಹಿನ್ನೆಲೆಯಲ್ಲಿ ಬೇಸರದಲ್ಲಿದ್ದ ಅರ್ಪಿತ್ ಈಗ ನೇಣಿಗೆ ಶರಣಾಗಿದ್ದು, ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


