ಮಂಡ್ಯ: ಎತ್ತಿನಗಾಡಿ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಎತ್ತುಗಳು ರಸ್ತೆಯಲ್ಲಿ ನರಳಾಡುತ್ತಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯ ತಾಲೂಕಿನ ಪಣಕನಹಳ್ಳಿ ಬಳಿ ಇಂದು ಬೆಳಗ್ಗೆ ಮಿನಿ ಬಸ್ ಮತ್ತು ಎತ್ತಿನಗಾಡಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎತ್ತಿನಗಾಡಿ ಮಾಲೀಕ ಹೊಳಲು ಗ್ರಾಮದ ಕೃಷ್ಣ ಗಾಯಗೊಂಡಿದ್ದಾರೆ. ಮೈಸೂರಿನ ಇಲವಾಲ ಮೂಲದವರು ಬೀಗರ ಊಟಕ್ಕೆಂದು ಹೊಳಲಿನ ದೇವಸ್ಥಾನಕ್ಕೆಂದು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.ಸ್ಥಳದಲ್ಲಿದ್ದ ಜನರು ಗಾಯಾಳು ಕೃಷ್ಣ ಅವ್ರನ್ನ ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲು ರವಾನಿಸಿದ್ರು. ಆದ್ರೆ ಎತ್ತುಗಳನ್ನು ಕರೆದುಕೊಂಡು ಹೋಗಲು ವಾಹನದ ಸೌಲಭ್ಯ ಇಲ್ಲದ ಹಿನ್ನೆಲೆಯಲ್ಲಿ ಎತ್ತುಗಳು ಅಲ್ಲಿಯೇ ನರಳುವಂತಾಗಿದೆ. ಘಟನೆ ಸಂಬಂಧ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. Sign in to your account
Username or Email Address


Password

 Remember Me


