ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಒಂದು ಪಲ್ಟಿ ಹೊಡೆದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ದೇವರಹಿಪ್ಪರಗಿ ಪಟ್ಟಣದ ಬಳಿ ನಡೆದಿದೆ.ಓರ್ವ ಮಹಿಳೆ ಸೇರಿದಂತೆ ಮೂವರು ಪುರುಷರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೆಎ 48 ಎಂ 3625. ನಂಬರಿನ ಕ್ರೂಸರನ್ನು ಚಲಾಯಿಸುತ್ತಿದ್ದ ಚಾಲಕ ಅಬ್ದುಲ್ (35), ಮಹಾನಂದ ಕೆರೂರ (40), ಮಾನಿಂಗಸಾಹುಕಾರ ಕಾಸರ್ (50) ಮೃತ ದುರ್ದೈವಿಗಳು. ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ. ಮೃತರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬನಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ.ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ದೇವರ ಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.  Sign in to your account
Username or Email Address


Password

 Remember Me


