ಬೆಂಗಳೂರು: ಪರ ಪುರುಷರನ್ನ ನೋಡಬಾರದೆಂದು ಪತಿಯೊಬ್ಬ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿದ್ದು ಆಕೆ ಈಗ ತನ್ನ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಕೊತ್ತನೂರಿನ ನಾಗೇನಹಳ್ಳಿಯ ನಿವಾಸಿಯಾದ ಒಡಿಶಾ ಮೂಲದ ಮುನ್ನಾ ತನ್ನ ಹೆಂಡತಿ ರಾಧಾ ಮೇಲೆ ಅನುಮಾನಗೊಂಡು ಆಕೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆ ವೇಳೆ ಪತ್ನಿ ಕಣ್ಣಿಗೆ ಪೆಟ್ಟು ಬಿದ್ದಿದ್ದು, ಈಗ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ. ರಾಧಾ ಅವರನ್ನ ಸದ್ಯಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.ಮುನ್ನಾ-ರಾಧಾ ದಂಪತಿ 15 ದಿನಗಳ ಹಿಂದಷ್ಟೆ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಶೋಭಾ ಡೆವಲಪರ್ಸ್ ಕಂಪೆನಿಯಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ಘಟನೆ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಇದನ್ನೂ ಓದಿ: ಪರಪುರುಷರು ನೋಡದೇ ಇರಲು ಸುಂದರಿ ಪತ್ನಿಯ ತಲೆಯನ್ನೇ ಬೋಳಿಸಿದ ಪತಿರಾಯ!Sign in to your account
Username or Email Address


Password

 Remember Me


