ಮಂಗಳೂರು: ನಗರದ ಬಜರಂಗದಳ ಮುಖಂಡ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ.ಪಣಂಬೂರಿನ ತೋಟ ಬೆಂಗ್ರೆಯ ನಿವಾಸಿ ಜಗದೀಶ್ ಸುವರ್ಣ ಎಂಬವರು ಗುರುವಾರ ಸ್ನೇಹಿತನ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿದ್ರು. ಸ್ನೇಹಿತನ ಮನೆಯಿಂದ ಮುಂಜಾನೆ ಮನೆಗೆ ವಾಪಾಸ್ ಆದವರು ಮನೆಗೆ ಮರಳಿ ಬಂದಿರಲಿಲ್ಲ. ಶುಕ್ರವಾರ ಸಂಜೆ ಬೆಂಗ್ರೆ ನದಿಯ ಅಳಿವೆ ಬಾಗಿಲಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಅಂತಾ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿದಾಡ್ತಿವೆ.ಜಗದೀಶ್ ಮನೆಯವರು ನೀಡಿರೋ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ರು ಅನುಮಾನಾಸ್ಪದ ಸಾವು ಅಂತ ಕೇಸ್ ದಾಖಲಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕವಷ್ಟೇ ಅಪಘಾತದಿಂದ ಮೃತಪಟ್ಟಿದ್ದಾರೆಯೋ ಅಥವಾ ಕೊಲೆಯೋ ಅಂತ ನಿಜಾಂಶ ಗೊತ್ತಾಗಬೇಕಿದೆ.ಮೃತ ಜಗದೀಶ್ ಸುವರ್ಣ ನದಿಯಲ್ಲಿ ಪ್ರಯಾಣಿಕರ ಲಾಂಚರ್‍ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡ್ತಿದ್ರು. ಮೂಗು, ಬಾಯಲ್ಲಿ ರಕ್ತ ಬಂದಿದ್ದು, ಕೊಲೆ ಅನ್ನೋ ಶಂಕೆ ದಟ್ಟವಾಗಿದೆ. ಮರಣೋತ್ತರ ಪರೀಕ್ಷೆ ಬಂದ ಬಳಿಕವಷ್ಟೇ ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.Sign in to your account
Username or Email Address


Password

 Remember Me


