ತುಮಕೂರು: ಗೋಶಾಲೆಗೆ ತೆರಳುತ್ತಿದ್ದ ಮೇವಿನ ಲಾರಿಗೆ ಬೆಂಕಿಬಿದ್ದು ಮೇವು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹೊಸಕೆರೆಯಲ್ಲಿ ನಡೆದಿದೆ.ಮೇವು ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿ ಮೇವಿಗೆ ಬೆಂಕಿ ಹೊತ್ತಿಕೊಂಡಿದೆ. ಇದೇ ಸಂದರ್ಭದಲ್ಲಿ ಬಿಸಿಲಿನ ತಾಪಕ್ಕೆ ಇಡೀ ಲಾರಿಯಲ್ಲಿದ್ದ ಮೇವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರೈತರು ಮೇವಿಗಾಗಿ ಪರಿತಪಿಸುತ್ತಿರುವ ಸಂರ್ದಭದಲ್ಲಿ ಈ ರೀತಿಯ ಘಟನೆ ನಡೆದಿರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ.Sign in to your account
Username or Email Address


Password

 Remember Me


