ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನೆಲಮಂಗಲ ಪಟ್ಟಣದ ಸೊಂಡೇಕುಪ್ಪ ಬೈಪಾಸ್ ಬಳಿ ನಡೆದಿದೆ.ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಬಸ್‍ನಲ್ಲಿ ಈ ಬೆಂಕಿ ಅವಘಡ ನಡೆದಿದ್ದು, ಕೆಲಕಾಲ ಪ್ರಯಾಣಿಕರಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಡ್ರೈವರ್ ಎಂಜಿನ್‍ನಲ್ಲಿ ಕಾಣಿಸಿಕೊಂಡ ಬೆಂಕಿಗೆ ನೀರು ಹಾಕಿ ನಂದಿಸಿದ್ರು. ಹೀಗಾಗಿ ಆತಂಕಗೊಂಡ ಪ್ರಯಾಣಿಕರು ಬಸ್‍ನಿಂದ ಕೆಳಗೆ ಇಳಿದರು.ಎರಡು ತಿಂಗಳ ಹಿಂದೆ ಇದೇ ರಸ್ತೆಯಲ್ಲಿ ಬಸ್‍ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಬ್ಬರು ಪ್ರಯಾಣಿಕರು ದಾರುಣವಾಗಿ ಸಾವನಪ್ಪಿದ್ದರು.Sign in to your account
Username or Email Address


Password

 Remember Me


