ಮೈಸೂರು: ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ಕಟೌಟ್ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದ ಮೂವರು ಮೃತಪಟ್ಟು ಆರು ಜನರು ಗಂಭೀರವಾಗಿ ಗಾಯಗೊಂಡಿರೋ ಘಟನೆ ಜಿಲ್ಲೆಯ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ.ಮಣಿಕಂಠ (27), ಕುಮಾರ್ (40), ಶಿವು (25) ಸಾವನ್ನಪ್ಪಿದ ದುರ್ದೈವಿಗಳು. ಕ್ಯಾತಮಾರನಹಳ್ಳಿಯ ಎಕೆ ಕಾಲೋನಿಯ ನಿಂಬೆಯಣ್ಣ ವೃತ್ತದ ಬಳಿ ಗುರುವಾರ ರಾತ್ರಿ ಅಂಬೇಡ್ಕರ್ ಅವರ ಬೃಹತ್ ಕಟೌಟ್ ಅಳವಡಿಸಲು ಸಿದ್ಧತೆ ಮಾಡಲಾಗಿತ್ತು. ಅಂಬೇಡ್ಕರ್ ಅವರ 30 ಅಡಿ ಎತ್ತರದ ಕಟೌಟ್‍ಗೆ ಕಬ್ಬಿಣದ ಫ್ರೇಂ ಹಾಕಿ ಕಟ್ಟಲಾಗುತ್ತಿತ್ತು. ಕಬ್ಬಿಣದ ಫ್ರೇಂ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಗಂಭೀರವಾಗಿ ಗಾಯಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಕೆಆರ್ ಆಸ್ಪತ್ರೆಯ ಶವಾಗಾರದಲ್ಲಿದ್ದ ಮೃತದೇಹಗಳನ್ನ ಇರಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಕೊಡಿಸುವುದಾಗಿ ತಿಳಿಸಿದರು. Sign in to your account
Username or Email Address


Password

 Remember Me


