ಕಾರವಾರ: ಅಕ್ರಮವಾಗಿ ಮರಳು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಠಾಣೆಯ ಪಿಎಸ್‍ಐ ಲಂಚ ಸ್ವೀಕರಿಸಿ ಮತ್ತೆ ಬೇಡಿಕೆ ಇಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಬನವಾಸಿ ಠಾಣಾ ಪಿಎಸ್‍ಐ ಸುರೇಖಾ ಬಾಡ್ಕರ್ ನಾಲ್ಕು ದಿನಗಳ ಹಿಂದೆ ಅಕ್ರಮ ಮರಳು ಸಾಗಿಸುತಿದ್ದ ಲಾರಿಯನ್ನು ಹಿಡಿದು ಲಾರಿ ಮಾಲೀಕನಿಂದ 10 ಸಾವಿರ ರೂ. ಡಿಮ್ಯಾಂಡ್ ಮಾಡಿದ್ದರು. ಲಾರಿ ಮಾಲೀಕ 4 ಸಾವಿರ ಹಣ ನೀಡಿ ಉಳಿದ 6 ಸಾವಿರ ಹಣವನ್ನು ಠಾಣೆಯಲ್ಲಿ ನೀಡಿದ್ದಾನೆ.ಠಾಣೆಯಲ್ಲಿ ಲಂಚ ನೀಡುವಾಗ ತನ್ನ ಮೊಬೈಲ್‍ನಲ್ಲಿ ದೃಶ್ಯಾವಳಿಯನ್ನು ಸೆರೆ ಹಿಡಿದು ವಾಟ್ಸಪ್ ಮೂಲಕ ಹರಿಬಿಟ್ಟಿದ್ದಾನೆ. ಈಗ ಜಿಲ್ಲೆಯಾದ್ಯಾಂತ ಈ ವಿಡಿಯೋ ವೈರಲ್ ಆಗಿದೆ.Sign in to your account
Username or Email Address


Password

 Remember Me


