ಉಡುಪಿ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಹಣದ ಹೊಳೆ ಗೆದ್ದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.ಇಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿಕೊಟ್ಟ ಅವರು ಪೇಜಾವರ ಶ್ರೀಗಳ ಜೊತೆ ಮಾತುಕತೆ ನಡೆಸಿ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಹೇಗಾದ್ರು ಮಾಡಿ ಗೆಲ್ಲಲೇ ಬೇಕು ಎಂದು ಅಂತ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದರು. ಅದರಂತೆ ಹಣದ ಹೊಳೆಯನ್ನು ಹರಿಸಿ ಗೆದ್ದಿದ್ದಾರೆ ಎಂದು ಶೆಟ್ಟರ್ ಹೇಳಿದರು.2018ರ ಚುನಾವಣೆಗೆ ಈ ರಿಸಲ್ಟ್ ದಿಕ್ಸೂಚಿಯಲ್ಲ. ಸ್ವತಃ ಸಿಎಂ ಚುನಾವಣೆಗೆ ಮುನ್ನ ಇದು ದಿಕ್ಸೂಚಿಯಲ್ಲ ಅಂತ ಹೇಳುತ್ತಿದ್ದರು. ಆದ್ರೆ ಈಗ ಯೂ ಟರ್ನ್ ತೆಗೆದುಕೊಂಡಿದ್ದಾರೆ. ಇದೇ ದಿಕ್ಸೂಚಿ ಅನ್ನುತ್ತಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಮುಂದೆಯೂ ಚುನಾವಣೆ ಎದುರಿಸ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರೋದ್ರಿಂದ ಕಾಂಗ್ರೆಸ್ ಗೆದ್ದಿದೆ. ಮುಂದಿನ ಮಹಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸುತ್ತದೆ ಎಂದು ತಿಳಿಸಿದರು.ಶ್ರೀನಿವಾಸಪ್ರಸಾದ್ ಅವರು ಹಿರಿಯ ನಾಯಕರು, ಅವರಿಗೆ ಪಕ್ಷದಲ್ಲಿ ಸೂಕ್ತಸ್ಥಾನಮಾನ ಕೊಡುತ್ತೇವೆ. ಈಗ ಹೇಗೆ ನೋಡಿಕೊಳ್ಳುತ್ತೇವೋ ಅದರಂತೆಯೇ ಮುಂದೆಯೂ ಗೌರವದಿಂದ ನೋಡಿಕೊಳ್ಳುತ್ತೇವೆ. ಗೌರವಯುತವಾದ ಸ್ಥಾನಮಾನವನ್ನು ಕೊಡುತ್ತೇವೆ ಎಂದು ಭರವಸೆ ನೀಡಿದರು. ಪತಿಯ ಅಭಿವೃದ್ಧಿ ಕೆಲ್ಸದಿಂದ ಗೆದ್ದಿದ್ದೇನೆ: ಪ್ರತಾಪ್ ಸಿಂಹಗೆ ಗೀತಾ ಮಹಾದೇವ್‍ಪ್ರಸಾದ್ ಟಾಂಗ್ https://t.co/7NdHUf46z5#Karnataka #bypolls #Congress pic.twitter.com/pHPnJMllva— PublicTV (@publictvnews) April 13, 2017ನಂಜನಗೂಡಿನಲ್ಲಿ ಕಾಂಗ್ರೆಸ್‍ಗೆ ‘ಪ್ರಸಾದ’ https://t.co/2g84dDENM0#Karnataka #bypolls #Congress #Nanjanagud #kalalekeshavamurthy #BJP pic.twitter.com/I412MgJSSg— PublicTV (@publictvnews) April 13, 2017ಗುಂಡ್ಲುಪೇಟೆ: 12,077 ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು, ಕಾಂಗ್ರೆಸ್ – 87,687, ಬಿಜೆಪಿ- 75610 ಮತಗಳು @raveeshmysore @kp_nagaraj @KPCCofficial— PublicTV (@publictvnews) April 13, 2017ಮಹದೇವ ಪ್ರಸಾದ್ ಅವ್ರ ಕೆಲ್ಸಕ್ಕೆ ಜನ ನೀಡಿದ ಕಾಣಿಕೆಯಿದು: ಖಾದರ್https://t.co/Ukbziz8z6W#Gundlupete #ByElection @utkhader #GeethaMhadevaprasad pic.twitter.com/NoHkrLyyvG— PublicTV (@publictvnews) April 13, 2017It's time to accept the defeat. Congratulations to Congress, especially to @CMofKarnataka Sir— Pratap Simha (@mepratap) April 13, 2017ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಜಯಶೀಲರಾದ ಪಕ್ಷದ ಅಭ್ಯರ್ಥಿಗಳಾದ ಕಳಲೆ ಕೇಶವಮೂರ್ತಿ ಹಾಗೂ ಗೀತಾ ಮಹದೇವಪ್ರಸಾದ್ ಅವರಿಗೆ ಅಭಿನಂದನೆಗಳು1/2— CM of Karnataka (@CMofKarnataka) April 13, 2017ಉಪಚುನಾವಣೆ ಫಲಿತಾಂಶವು ಜನರಿಗೆ, ಜನಪರ ಆಡಳಿತಕ್ಕೆ ಸಂದ ಯಶಸ್ಸು. ಸರ್ಕಾರದ ಕಾರ್ಯಕ್ರಮಗಳಿಗೆ, ಪಕ್ಷದ ಸಂಘಟಿತ ಚುನಾವಣಾ ಹೋರಾಟಕ್ಕೆ ಸಿಕ್ಕ ಮನ್ನಣೆ. 2/2— CM of Karnataka (@CMofKarnataka) April 13, 2017ಉಪ ಚುನಾವಣೆಯಲ್ಲಿ ಗೆದ್ದ ತಕ್ಷಣ ರಾಜ್ಯದ ಜನ ಕಾಂಗ್ರೆಸ್ ಪರ ಇದ್ದಾರೆ ಅಂತೇನಲ್ಲ: ಬಿಎಸ್‍ವೈhttps://t.co/xARxMbokWO#Bengaluru @BSYBJP @KPCCofficial pic.twitter.com/gGYYKkv1Ld— PublicTV (@publictvnews) April 13, 2017ನಾವು ಅಭ್ಯರ್ಥಿಗಳನ್ನು ಹಾಕದೇ ಇರುವುದು ಕಾಂಗ್ರೆಸ್‍ಗೆ ವರವಾಗಿದೆ: ಹೆಚ್‍ಡಿಕೆ https://t.co/TpHqikNoaf @hd_kumaraswamy #Gundlupete #Nanjanagud pic.twitter.com/MfNfRQmN6M— PublicTV (@publictvnews) April 13, 2017 ಎಸ್‍ಎಂಕೆ, ಕುಮಾರ್ ಬಂಗಾರಪ್ಪ ಬಿಜೆಪಿ ಸೇರಿದ್ರಿಂದ ಕಾಂಗ್ರೆಸ್‍ಗೆ ಗೆಲುವು: ದಿನೇಶ್ ಗುಂಡೂರಾವ್ https://t.co/Q6BWFFJEOA @dineshgrao #Gundlupet #Najanagud pic.twitter.com/IG2NjsgY5w— PublicTV (@publictvnews) April 13, 2017Sign in to your account
Username or Email Address


Password

 Remember Me


