ಚಿಕ್ಕಬಳ್ಳಾಪುರ: ನೀವು ಬಳಸುವ ಸಕ್ಕರೆ ಆರೋಗ್ಯಕ್ಕೆ ಎಷ್ಟು ಸೇಫ್ ಎಂಬುದನ್ನು ಒಮ್ಮೆ ನೀರಿಗೆ ಹಾಕಿ ಪರೀಕ್ಷೆ ಮಾಡಿ. ಕೆಲವು ದಿನಗಳ ಹಿಂದೆ ಅನ್ನಭಾಗ್ಯದ ಉಪ್ಪು ನೀಲಿ ಬಣ್ಣಕ್ಕೆ ತಿರುಗಿದ ಸುದ್ದಿ ಪ್ರಕಟವಾಗಿತ್ತು. ಇದೀಗ ಸಕ್ಕರೆಯ ಸರದಿ. ಚಿಕ್ಕಬಳ್ಳಾಪುರ ನಗರದ ಹೋಟೆಲ್‍ವೊಂದರಲ್ಲಿ ಸಕ್ಕರೆ ಹಸಿರು ಬಣ್ಣಕ್ಕೆ ತಿರುಗಿ ಜನರಲ್ಲಿ ಆತಂಕ ಉಂಟುಮಾಡಿದೆ.ಇಂದು ಬೆಳಗ್ಗೆ ಗ್ರಾಹಕ ಸ್ನೇಕ್ ಪ್ರಥ್ವಿರಾಜ್ ಎಂಬವರು ಮೊಸರಿನ ಜೊತೆ ಸಕ್ಕರೆ ಮಿಶ್ರಣ ಮಾಡಿ ಸೇವಿಸುವಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಮತ್ತೆರೆಡು ಬಾರಿ ಇದೇ ರೀತಿ ಮೊಸರು ಹಾಗೂ ನೀರಿಗೆ ಸಕ್ಕರೆ ಮಿಶ್ರಣ ಮಾಡಿ ಪರಿಶೀಲನೆ ನಡೆಸಿದಾಗ ಸಕ್ಕರೆ ಮಿಶ್ರಿತ ನೀರು ಸಂಪೂರ್ಣ ಹಸಿರು ಬಣ್ಣಕ್ಕೆ ತಿರುಗಿದೆ. ಸಕ್ಕರೆಯಲ್ಲಿ ಯಾವೋದೋ ಕೆಮಿಕಲ್ ಸೇರಿರಬೇಕೆಂಬ ಅನುಮಾನ ಮೂಡಿದೆ. ಹೀಗಾಗಿ ಸಂಬಂಧಪಟ್ಟವರು ಸಕ್ಕರೆಯ ಗುಣಮಟ್ಟದ ಪರೀಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಗ್ರಾಹಕರು ಒತ್ತಾಯಿಸಿದ್ದಾರೆ.ಪ್ಲಾಸ್ಟಿಕ್ ಅಕ್ಕಿ: ಪಡಿತರದಾರರಿಗೆ ಸೊಸೈಟಿಯಲ್ಲಿ ವಿತರಿಸಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿಯ ನಿವಾಸಿ ಪುಟ್ಟರಾಜು ಅವರು ಮಾರ್ಚ್ 23 ರಂದು ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 40 ಕೆಜಿ ಅಕ್ಕಿ ತೆಗೆದುಕೊಂಡಿದ್ದರು.ಕೆಲ ದಿನದ ಬಳಿಕ ಸ್ವಲ್ಪ ಅಕ್ಕಿಯನ್ನು ತೆಗೆದುಕೊಂಡು ಹೋಗಿ ಮಿಲ್ ಮಾಡಿಸಿಕೊಂಡು ಮನೆಗೆ ತಂದಿದ್ದಾರೆ. ಮನೆಯಲ್ಲಿ ರೊಟ್ಟಿ ಮಾಡಲು ಮುಂದಾದಾಗ ಪ್ಲಾಸ್ಟಿಕ್ ವಸ್ತು ಸಿಕ್ಕಿದೆ. ಬಳಿಕ ಮಿಲ್ ಮಾಡಿಸಿದ ಅಕ್ಕಿಯನ್ನು ಪರಿಶೀಲನೆ ನಡೆಸಿದಾಗ ಸುಮಾರು ಒಂದು ಹಿಡಿಯಷ್ಟು ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದೆ ಎಂದು ಹೇಳಲಾಗಿದೆ. Sign in to your account
Username or Email Address


Password

 Remember Me


