ಗದಗ: ಜಿಲ್ಲೆಯ ರೋಣ ತಾಲೂಕಿನ ಜಕ್ಜಲಿ ಗ್ರಾಮದ ಸರಳ, ಸಜ್ಜನಿ, ಮೌಲ್ಯಾಧಾರಿತ ರಾಜಕಾರಣಿ ಹಾಗೂ ಸಾಹಿತಿಯಾಗಿದ್ದ ಜ್ಞಾನದೇವ ದೊಡ್ಡಮೇಟಿ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕರ್ನಾಟಕ ಏಕೀಕರಣ ಚಳವಳಿಯ ಪ್ರಮುಖರಾದ ದಿವಂಗತ ಅಂದಾನಪ್ಪ ದೊಡ್ಡಮೇಟಿ ಅವರ ಪುತ್ರರಿವರು. ಇವರು ಕೂಡಾ ಸ್ವಾತಂತ್ರ್ಯ ಹೋರಾಟ ಕಂಡಂತವರು. 1983 ಹಾಗೂ 85 ರಲ್ಲಿ ಎರಡು ಬಾರಿ ರೋಣ ಕ್ಷೇತ್ರದಿಂದ ಜನತಾಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಜ್ಞಾನದೇವ ದೊಡ್ಡಮೇಟಿಯವರು ಸಾಹಿತಿ ಸಹ ಆಗಿದ್ರು. ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಮತ್ತು ತಾಲೂಕು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ದೊಡ್ಡಮೇಟಿ ಅವರು ನಾಲ್ವರು ಪುತ್ರರು, ಓರ್ವ ಪುತ್ರಿ ಸೇರದಂತೆ ಅಪಾರ ಬಂಧು-ಬಳಗವನ್ನ ಅಗಲಿದ್ದಾರೆ. ಇಂದು ಸಂಜೆ ಗದಗ ಜಿಲ್ಲೆಯ ಜಕ್ಕಲ್ಲಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ದೊಡ್ಡಮೇಟಿ ಅವರ ಅಗಲಿಕೆಯಿಂದ ರಾಜಕೀಯ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಜ್ಞಾನದೇವ ದೊಡ್ಡಮೇಟಿ ಅವರಿಗೆ 86 ವರ್ಷ ವಯಸ್ಸಾಗಿತ್ತು. Sign in to your account
Username or Email Address


Password

 Remember Me


