ಕಾರವಾರ: ಇಂದು ಬೆಳಗ್ಗೆ ಕಾಡಿನಿಂದ ನಾಡಿಗೆ ಬಂದ ಕಡವೆಯೊಂದು ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕಾರವಾರ ನಗರದ ಆಲಿಗದ್ದಾ ಕಡಲ ತೀರದ ಸಮುದ್ರದಲ್ಲಿ ಬಿದ್ದಿತ್ತು.ಸಮುದ್ರದಲ್ಲಿ ಸುಮಾರು ಒಂದು ಘಂಟೆಗಳ ಕಾಲ ಕಡವೆ ಈಜುತ್ತಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಕೋಸ್ಟ್ ಗಾರ್ಡ್ ಸಿಬ್ಬಂದಿ ಸ್ಥಳಿಯ ಮೀನುಗಾರರ ಸಹಾಯದಿಂದ ಕಡವೆಯನ್ನು ರಕ್ಷಿಸಿದ್ದಾರೆ.ಮೂರು ವರ್ಷದ ಪ್ರಾಯದ ಕಡವೆಯನ್ನು ರಕ್ಷಿಸಿ, ಚಿಕಿತ್ಸೆ ನೀಡಿ ಅದನ್ನು ಮರಳಿ ಕಾಡಿಗೆ ಬಿಡಲಾಗಿದೆ.  Sign in to your account
Username or Email Address


Password

 Remember Me


