ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ರಾತ್ರಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಅಕಾಲಿಕ ಮಳೆಗೆ ರೈತರ ತೋಟಗಾರಿಕೆ ಬೆಳೆ ಹನಿಯಾಗಿದೆ.ಗುಡಿಬಂಡೆ ತಾಲೂಕಿನ ಕಂಬಾಲಹಳ್ಳಿ ಗ್ರಾಮದಲ್ಲಿ 15 ವರ್ಷದ ಬಾಲಕ ನಾಗರಾಜು ಮತ್ತು ಗೌರಿಬಿದನೂರು ತಾಲೂಕಿನ ಭಾದಮಳ್ಳೂರು ಗ್ರಾಮದಲ್ಲಿ ಕುರಿಗಾಹಿ ಭೀಮಪ್ಪ (55) ಎಂಬವರು ಸಿಡಿಲ ಬಡಿತಕ್ಕೆ ಸಾವನ್ನಪ್ಪಿದ್ದಾರೆ.ನಾಗರಾಜು ತೋಟದಿಂದ ಮನೆಗೆ ಬರುವ ವೇಳೆ ರಸ್ತೆಯಲ್ಲಿ ಸಿಡಿಲು ಬಡಿತಕ್ಕೆ ತಗುಲಿ ಸಾವನ್ನಪ್ಪಿದ್ದಾನೆ. ನಿನ್ನೆ ಕುರಿ ಕಾಯಲು ಹೋಗಿದ್ದ ಭೀಮಪ್ಪ ಅವರು ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇಂದು ಬೆಳಗ್ಗೆ ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಜಾಲಮರದ ಕೆಳಗೆ ಭೀಮಪ್ಪರ ಮೃತ ದೇಹ ಪತ್ತೆಯಾಗಿದೆ.ಅಕಾಲಿಕ ಮಳೆಯಿಂದಾಗಿ ಗೌರಿಬಿದನೂರು ತಾಲೂಕಿನ ವಿಳಪಿ ಗ್ರಾಮದ ನಾಗರಾಜು ಎಂಬುವವರ ಬಾಳೆತೋಟ ಸಂಪೂರ್ಣ ನೆಲಕಚ್ಚಿದೆ. ಹಲವೆಡೆ ತೋಟಗಾರಿಕಾ ಬೆಳೆಗಳಾದ ಮಾವು, ದ್ರಾಕ್ಷಿ ಬೆಳೆಗಳು ಸಹ ಹಾನಿಯಾಗಿ ಒಳಪಟ್ಟಿವೆ. ಇನ್ನು ಶಿಡ್ಲಘಟ್ಟ ತಾಲೂಕಿನ ಅಂಗತಟ್ಟಿ ಗ್ರಾಮದ ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದ್ದು ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಜಿಲ್ಲೆಯ ಜನತೆಗೆ ಮಳೆರಾಯ ತಂಪು ಎರೆದಿದ್ದು, ಕೆಲವು ಕಡೆ ಬೆಳೆ ಹಾನಿ ಕೂಡ ಸಂಭವಿಸಿದೆ.. Sign in to your account
Username or Email Address


Password

 Remember Me


