ರಾಯಚೂರು:ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ.ನರೇಂದ್ರ (28) ಮತ್ತು ರವಿ (25) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ ಯುವಕರು. ಇನ್ನೋರ್ವ ಸವಾರ ಸಹದೇವ್‍ಗೆ ಗಂಭೀರ ಗಾಯಗಳಾಗಿದ್ದು, ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಅತಿ ವೇಗದಲ್ಲಿ ಬಂದ ಬೈಕ್ ರಸ್ತೆ ತಿರುವಿನ ವೇಳೆ ನಿಯಂತ್ರಣಕ್ಕೆ ಬರದೇ ಸೇತುವೆಗೆ ಡಿಕ್ಕಿ ಹೊಡೆದಿದೆ. ಯುವಕರು ಸಿಂಧನೂರು ಪಟ್ಟಣದಿಂದ ಮಾನ್ವಿಗೆ ಬರುತ್ತಿದ್ದರು. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


