ಮೈಸೂರು: ನಂಜನಗೂಡು ಉಪ ಚುನಾವಣೆ ಕಣದಲ್ಲಿ ರಾಜಕೀಯ ಸಂಘರ್ಷ ನಡೆದಿದೆ. ಚುನಾವಣಾ ವೈಷಮ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ನಡುವೆ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ.ನಂಜನಗೂಡು ತಾಲೂಕಿನ ರಾಜೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ನಟ ಜಗ್ಗೇಶ್ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಆಗಮಿಸುವುದಕ್ಕೂ ಮುನ್ನ ಗಲಾಟೆ ನಡೆದಿದೆ. ಗಲಾಟೆಯಲ್ಲಿ ರಾಜೂರು ಗ್ರಾಮದ ಬಸವರಾಜು ಮತ್ತು ಚಿನ್ನಮ್ಮ ಎಂಬವರಿಗೆ ಗಾಯಗಳಾಗಿದೆ. ಗಾಯಳಾಗಳನ್ನು ನಂಜನಗೂಡಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲ್ಲು ತೂರಾಟದಲ್ಲಿ ಗಾಯಗೊಂಡಿರುವ ಚಿನ್ನಮ್ಮರಿಗೆ ಮಾತು ಬರುವುದಿಲ್ಲ ಎಂದು ತಿಳಿದುಬಂದಿದೆ.ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾಜೂರು ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ನಂಜನಗೂಡು ಮತಕ್ಷೇತ್ರ ಪ್ರತಿಷ್ಠೆಯ ಕಣವಾದ್ದರಿಂದ ಈ ರೀತಿಯ ಗಲಾಟೆಗಳು ನಡೆಯುತ್ತಿವೆ ಎನ್ನಲಾಗಿದೆ. Sign in to your account
Username or Email Address


Password

 Remember Me


