ಧಾರವಾಡ: ನವಜಾತ ಹೆಣ್ಣು ಮಗುವನ್ನು ತಾಯಿಯೊಬ್ಬಳು ನಗರದ ಕೃಷಿ ವಿವಿ ಬಳಿಯ ಬಸವೇಶ್ವರ ದೇವಸ್ಥಾನದಲ್ಲಿ ಬಿಟ್ಟು ಹೋಗಿದ್ದಾಳೆ.ದೇವಸ್ಥಾನದ ಬಳಿ ಮಗು ಇರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮಗುವನ್ನು 108 ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.ಸದ್ಯ ನವಜಾತು ಮಗು ಜಿಲ್ಲಾಸ್ಪತ್ರೆಯಲ್ಲಿ ಆರೈಕೆಯಲ್ಲಿದೆ. ಮಗು ಆರೋಗ್ಯವಾಗಿದ್ದು, ಅದನ್ನ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಲಾಗುತ್ತಿದೆ. ಇನ್ನು ಈ ಮಗು 7 ರಿಂದ 8 ದಿನಗಳ ಹಿಂದೆಯೇ ಹುಟ್ಟಿದೆ ಎಂದು ಆಸ್ಪತ್ರೆಯ ವೈದ್ಯ ಗಿರಿಧರ್ ಹೇಳಿದ್ದಾರೆ. Sign in to your account
Username or Email Address


Password

 Remember Me


