ಧಾರವಾಡ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಹಾಲ್ ಟಿಕೆಟ್ ನೀಡಲು ಶಿಕ್ಷಕರು ಹಾಗೂ ಪ್ರಾಂಶುಪಾಲರು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಧಾರವಾಡದಲ್ಲಿ ನಡೆದಿದೆ.ತಾಲೂಕಿನ ಹೊನ್ನಾಪುರ ಗ್ರಾಮದ ಪ್ರಭುದೇವ ಶಾಲೆಯ ಶಿಕ್ಷಕರೇ ಹಾಲ್ ಟಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಟ್ಟವರು. ಮಾರ್ಚ್ 30ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಲಿವೆ. ಈ ನಡುವೆ ವಿದ್ಯಾರ್ಥಿಗಳಿಗೆ ಯಾವುದೇ ದಾರಿ ಇಲ್ಲದೇ ಹಣ ಕೊಟ್ಟು ಹಾಲ್ ಟಿಕೆಟ್ ತೆಗೆದುಕೊಳ್ಳುವ ಅನಿವಾರ್ಯತೆ ಎದುರಾಗಿದೆ.ಸದ್ಯ 100 ರೂಪಾಯಿ ಯಿಂದ 200 ರೂಪಾಯಿ ಬೇಡಿಕೆ ಇಟ್ಟ ಶಿಕ್ಷಕರ ಮೇಲೆ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.Sign in to your account
Username or Email Address


Password

 Remember Me


